ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ

ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ವಿರೋದಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಕಾರರು ಸರಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆಯಿಂದಾಗಿ ಜನತೆಯ ಮೇಲೆ ಆಗಿರುವ ಹೊರೆಯನ್ನು ಇಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಮ್ ಮಂಗಳೂರು ನಗರ ಜಿಲ್ಲಾದ್ಯಕ್ಷೆ ನಿಶಾ ವಾಮಂಜೂರು ಅವರು ‘ ಪ್ರಧಾನಿ ನರೇಂದ್ರ ಮೋದಿ ಅವರ ಸಬ್ಕ ಸಾಥ್ ಸಬ್ಕ ವಿಕಾಸ್ ಎಲ್ಲ ಬಕ್ವಾಸ್ ಎಂಬುದು ದೇಶದ ಜನರಿಗೆ ಈಗ ಅರ್ಥವಾಗಿದೆ. ಜನರಿಗೆ ಬದುಕಲು ಸಾಧ್ಯವಿಲ್ಲದಂತೆ ಅಗತ್ಯ ವಸ್ತುಗಳಿಗೆ ಕೇಂದ್ರ ಸರಕಾರ ಬೆಲೆ ಏರಿಸಿದೆ. ಕಾರ್ಪೋರೇಟ್‌ಗಳನ್ನು ಬೆಂಬಲಿಸುವ ಭರದಲ್ಲಿ ಜನಸಾಮನ್ಯರನ್ನು ಸರಕಾರ ಮರೆತಿದೆ ಎಂದರು.

ವಿಮೆನ್ ಇಂಡಿಯ ಮೂವ್‌ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜೊತೆ ಕಾರ್ಯದರ್ಶಿ ಅಝ್ವೀನಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!