ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡ್ : ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವ 2025

ಉಪನಿಷತ್ತ್, ಭಗವದ್ಗೀತೆ, ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು ಉಂಟಾಗುತ್ತದೆ. ದುಷ್ಟರ ನಾಶವಾಗಿ ಶಿಷ್ಟರ ರಕ್ಷಣೆಯ ಬಗ್ಗೆಯೂ ಯಕ್ಷಗಾನದಲ್ಲಿ ತಿಳಿಯುತ್ತದೆ ಎಂದು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದ್ದಾರೆ.

ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಗೆಜ್ಜೆಗಿರಿ ಮೇಳದವರಿಂದ ನಡೆದ ಯಕ್ಷೋತ್ಸವ 2025 ಕಾರ್ಯಕ್ರಮದ ಧಾರ್ಮಿಕ ಕಾಯಕ್ರಮದಲ್ಲಿ ಮಾತನಾಡಿ ನಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗ ಸದಾ ಪ್ರೇರಣೆ ನೀಡಲಿ ಎಂದರು.

ಇದೇ ಸಂದರ್ಭ ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ ಗಣಪತಿ ಭಟ್, ಉದ್ಯಮಿ ಭರತ್ ಅಂಚನ್ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!