ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡ್ : ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವ 2025

ಉಪನಿಷತ್ತ್, ಭಗವದ್ಗೀತೆ, ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು ಉಂಟಾಗುತ್ತದೆ. ದುಷ್ಟರ ನಾಶವಾಗಿ ಶಿಷ್ಟರ ರಕ್ಷಣೆಯ ಬಗ್ಗೆಯೂ ಯಕ್ಷಗಾನದಲ್ಲಿ ತಿಳಿಯುತ್ತದೆ ಎಂದು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದ್ದಾರೆ.

ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಗೆಜ್ಜೆಗಿರಿ ಮೇಳದವರಿಂದ ನಡೆದ ಯಕ್ಷೋತ್ಸವ 2025 ಕಾರ್ಯಕ್ರಮದ ಧಾರ್ಮಿಕ ಕಾಯಕ್ರಮದಲ್ಲಿ ಮಾತನಾಡಿ ನಮ್ಮ ಧರ್ಮರಕ್ಷಣೆಯ ಕೈಂಕರ್ಯದಲ್ಲಿ ಯಕ್ಷಗಾನ ಪ್ರಸಂಗ ಸದಾ ಪ್ರೇರಣೆ ನೀಡಲಿ ಎಂದರು.

ಇದೇ ಸಂದರ್ಭ ಮೇಳದ ಕಲಾವಿದರಾದ ಲಕ್ಣ್ಮಣ್ ಗೌಡ ಮುಚ್ಚೂರು, ದಾಮೋದರ ಪಾಟಾಳಿ, ದತ್ತೇಶ್ ಮಾವಿನಕಟ್ಡೆ, ಶ್ರೀಶ ಭಟ್ ಪೊಳಲಿ, ವಿಶ್ವನಾಥ ಕುಲಾಲ್ ಪದ್ಮುಂಜ ಮತ್ತು ಬಾಬಣ್ಣ ಪಾರೆಂಕಿ ಮಡಂತ್ಯಾರ್ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮೇಳದ ಪ್ರಧಾನ ಭಾಗವತರಾದ ಯೋಗೀಶ್ ಶರ್ಮ ಅಳದಂಗಡಿ, ಪ್ರಸಂಗಕರ್ತ ನಿತಿನ್ ಕುಮಾರ್ ತೆಂಕಕಾರಂದೂರು, ಹಿಮ್ಮೇಳ ಕಲಾವಿದ ಗಣಪತಿ ಭಟ್, ಉದ್ಯಮಿ ಭರತ್ ಅಂಚನ್ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!