ಜನ ಮನದ ನಾಡಿ ಮಿಡಿತ

Advertisement

ಜೈಪುರ : ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಪ್ರದರ್ಶನಕ್ಕೆ ಮನಸೋತ ತೆಂಡೂಲ್ಕರ್

ಜೈಪುರ: ಬಿಹಾರದ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ನಿರ್ಭೀತ ಬ್ಯಾಟಿಂಗ್‌ಗೆ ಇಡೀ ಕ್ರೀಡಾ ಜಗತ್ತೇ ಮನ ಸೋತಿದೆ. ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್‌ ಕೂಡ ಸೂರ್ಯವಂಶಿ ಬ್ಯಾಟಿಂಗ್‌ಗೆ ಮನಸೋತಿದ್ದಾರೆ. ‘ವೈಭವ್ ನಿರ್ಭಿತ ಬ್ಯಾಟಿಂಗ್ ಶೈಲಿ, ಬ್ಯಾಟ್ ಸ್ಪೀಡ್, ಲೆಂಗ್ತ್‌ ಆರಿಸಿಕೊಳ್ಳುವ ರೀತಿ ನೋಡುವುದೇ ಕಣ್ಣಿಗೆ ಹಬ್ಬ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಬರೋಬ್ಬರಿ 1.1 ಕೋಟಿ ರೂ. ನೀಡಿ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಿತ್ತು. ಆಗ ಅವರಿಗೆ 13 ವರ್ಷ ವಯಸ್ಸಾಗಿತ್ತು. ಹರಾಜಿನಲ್ಲೇ ಕ್ರಿಕೆಟ್‌ ಪ್ರೇಮಿಗಳ ಹುಬ್ಬೇರಿಸುವಂತೆ ಮಾಡಿದ್ದ ಈ ಪೋರ ಅತಿ ವೇಗದ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾನೆ.

ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ವೈಭವ್, ತಾವಾಡಿದ ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿ ತಾವೊಬ್ಬ ಅಪಾಯಕಾರಿ ಬ್ಯಾಟರ್‌ ಎನ್ನುವ ಸೂಚನೆ ನೀಡಿದ್ದರು. ಇದನ್ನೂ ಸಾಧಿಸಿಯೂ ತೋರಿಸಿದ್ದಾರೆ. ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ ಮೂಲಕ ವಿಶ್ವದರ್ಜೆಯ ಬೌಲರ್‌ಗಳಿಗೂ ಚಳಿ ಬಿಡಿಸಿದ್ದಾರೆ. ಅದರಲ್ಲೂ ಸಿಕ್ಸರ್‌ ಮೂಲಕವೇ ಶತಕ ಬಾರಿಸಿದ್ದು ಅವರ ರನ್‌ ದಾಹ ಎಷ್ಟರ ಮಟ್ಟಿಗೆ ಇದೆ ಎನ್ನುವುದು ಸಾಭೀತಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!