ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮದ್ಯದ ಅಮಲಿನಲ್ಲಿ ನಡೆಯಿತು ಹತ್ಯೆ; ತಂದೆ ತಾಯಿಯನ್ನೇ ಕೊಂದ ಪಾಪಿ ಮಗ!

ಮಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ತಂದೆ ತಾಯಿಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ.
ಕೊಲೆಯಾದ ದಂಪತಿಗಳನ್ನು ಮಂಗಳೂರಿನ ಭಾಸ್ಕರ್ (64) ಮತ್ತು ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿ ಶಾಂತಾ (60) ಎಂದು ಗುರುತಿಸಲಾಗಿದೆ.

ಮೂಲತಃ ಮಂಗಳೂರಿನವರಾದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ಅವರಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಮಗ ಖಾಸಗಿ ಕಂಪನಿಯಲ್ಲಿ ಉದ್ಯೋಗಿ. 2ನೇ ಮಗ ಆರೋಪಿ ಶರತ್ (27) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಆರೋಪಿ ಶರತ್ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಇಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಹಿರಿಯ ಮಗ ಪೋಷಕರಿಗೆ ಕರೆ ಮಾಡಿದ್ದಾನೆ. ಯಾರೂ ಉತ್ತರಿಸದಿದ್ದಾಗ ಪಕ್ಕದ ಮನೆಯವರಿಗೆ ಕರೆ ಮಾಡಿ ಪೋಷಕರ ಬಗ್ಗೆ ವಿಚಾರಿಸಿದ್ದಾರೆ. ಅಕ್ಕಪಕ್ಕದವರು ಬಂದು ನೋಡಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಶರತ್ ಮಾನಸಿಕವಾಗಿ ನೊಂದಿದ್ದು, ಪೋಷಕರೊಂದಿಗೆ ಜಗಳವಾಡುತ್ತಿದ್ದ. 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಶರತ್ ಯಾವಾಗಲೂ ಮನೆಯಲ್ಲೇ ಇರುತ್ತಿದ್ದ. ಕೆಲಸವಿಲ್ಲದೆ ಮನೆಯಲ್ಲಿದ್ದ ಶರತ್ ನ ವರ್ತನೆ ಸೈಕೋ ತರಹ ಇತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಅಹಿತಿ ಶರತ್ ಸಿಕ್ಕಿದ ನಂತರ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!