ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಅಪಘಾತದಲ್ಲಿ ಗಾಯಗೊಂಡವರಿಗೆ ₹1.5 ಲಕ್ಷದವರೆಗೆ ಕ್ಯಾಶ್‌ ಲೆಸ್ ಚಿಕಿತ್ಸೆ; ದೇಶಾದ್ಯಂತ ಹೊಸ ಯೋಜನೆ ಜಾರಿ!

ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ರಕ್ಷಣೆ ಮಾಡುವುದು ಬಹಳ ಮುಖ್ಯ. ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ.

ಕೇಂದ್ರ ಸರ್ಕಾರ ಅಪಘಾತದ ಗಾಯಾಳುಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ರಸ್ತೆ ಅಪಘಾತದ ಸಂತ್ರಸ್ತರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

 

ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಅಪಘಾತದ ದಿನದಿಂದ 7 ದಿನಗಳವರೆಗೆ 1.5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್‌ ಚಿಕಿತ್ಸೆ ನೀಡಲಾಗುತ್ತದೆ.

 

ನಿನ್ನೆಯಿಂದಲೇ ದೇಶಾದ್ಯಂತ ಈ ಯೋಜನೆ ಜಾರಿಯಾಗಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!