ಮಂಗಳೂರು ಹಾಗೂ ಮೈಸೂರಿನ ಕೊಲೆಯ ಸುದ್ದಿ ತಣಿಸುವ ಮೊದಲೇ ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾ ನನ್ನು ಹತ್ಯೆ ಮಾಡಲಾಗಿದೆ.

ನಿನ್ನೆ ಸಂಜೆ 8 ಜನ ಯುವಕರ ಗುಂಪೊಂದು ನಗರದ ಹದಡಿ ರಸ್ತೆಯ ಸೋಮೇಶ್ವರ ಆಸ್ಪತ್ರೆ ಎದುರಿಗಿರುವ ಕ್ಲಬ್ನಲ್ಲಿ ರೌಡಿಶೀಟರ್ನ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದವರೇ ವಿಡಿಯೋ ಕೂಡ ಮಾಡಿದ್ದಾರೆ. ಸದ್ಯ ಡಿವೈಎಸ್ಪಿ ಶರಣಬಸವೇಶ್ವರ ನೇತ್ರತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಕಣುಮಾನ ಮಗ ಓರ್ವ ಯುವತಿಯನ್ನು ಹತ್ಯೆ ಮಾಡಿದ ಕಾರಣಕ್ಕೆ ಪ್ರತೀಕಾರಕ್ಕಾಗಿ ಕೊಂದು ಬಳಿಕ ಮಗನಿಗೂ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ.



