ಜನ ಮನದ ನಾಡಿ ಮಿಡಿತ

Advertisement

ಬಿಳಿನೆಲೆ: ಕಾರಿಗೆ ಕಾರು ಢಿಕ್ಕಿ-ಒರ್ವ ಸಾವು…!!

ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ  ಸಂಭವಿಸಿದೆ.


ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.

ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!