ಜನ ಮನದ ನಾಡಿ ಮಿಡಿತ

Advertisement

ಬಿಳಿನೆಲೆ: ಕಾರಿಗೆ ಕಾರು ಢಿಕ್ಕಿ-ಒರ್ವ ಸಾವು…!!

ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ  ಸಂಭವಿಸಿದೆ.


ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.

ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!