ಜನ ಮನದ ನಾಡಿ ಮಿಡಿತ

Advertisement

ಉತ್ತರಕಾಶಿ : ಹೆಲಿಕಾಪ್ಟರ್ ಅಪಘಾತ; ಐವರು ಭಕ್ತರ ದುರ್ಮರಣ

ಉತ್ತರಾಖಂಡದ ಉತ್ತರಕಾಶಿ ಬಳಿ ಗುರುವಾರ ಬೆಳಿಗ್ಗೆ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ 5 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಚಾರ್ ಧಾಮ್ ಯಾತ್ರೆ ಆರಂಭಗೊಂಡ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.

ಹೆಲಿಕಾಪ್ಟರ್ ಪತನವನ್ನು ಉತ್ತರಕಾಶಿ ಜಿಲ್ಲಾಧಿಕಾರಿ ವಿನಯ್ ಶಂಕರ್ ಪಾಂಡೆ ದೃಢಪಡಿಸಿದ್ದಾರೆ. ಹೆಲಿಕಾಪ್ಟರ್ ಪತನದ ಸ್ಥಳದಲ್ಲಿ ಪರಿಹಾರ ತಂಡಗಳು ಉಪಸ್ಥಿತವಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ ಎಂದು ಅವರು ತಿಳಿಸಿರುವುದಾಗಿ ಮಾಧ್ಯಮ ಏಂಜೆನ್ಸಿ ತಿಳಿಸಿದೆ.

ಉತ್ತರಕಾಶಿಯ ಗಂಗಾನಿ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಸಾವನ್ನಪ್ಪಿರುವುದು ದುಃಖ ತಂದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿವೆ. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಮತ್ತು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಧಾಮಿ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!