ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಉಡುಪಿ ಜಿಲ್ಲೆ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಪೂರಕವಾಗಿದೆ

ಮರವಂತೆಯಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ಹಾಗೂ ಮದ್ಯೆ ರಸ್ತೆಯಿದ್ದು ಇದೊಂದು ಅದ್ಭುತ ಪ್ರದೇಶ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯಕ್ರಮ ವಹಿಸಲಾಗುವುದು ಎಂದು ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು. ಗುರುವಾರ ಸಂಜೆ ತ್ರಾಸಿ- ಮರವಂತೆ ಸಮುದ್ರ ತೀರ ವೀಕ್ಷಣೆ ಬಳಿಕ ಅವರು ಇಲ್ಲಿನ ಅಭಿವೃದ್ಧಿ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಸಹಿತ ಮರವಂತೆ, ಸೋಮೇಶ್ವರ ಬೀಚ್ ಅಭಿವೃದ್ಧಿಯ ಕುರಿತು ತಿಂಗಳ ಹಿಂದೆ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. ‘ಸಾಸಿ’ ಎನ್ನುವ ಯೋಜನೆಯಡಿ ಪಡುವರಿ-ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು. ಗುರುವಾರ ಕೇಂದ್ರ ಮಂತ್ರಿಗಳು ಈ ಮೂರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ ಎಂದರು. ಇದಕ್ಕೂ ಮೊದಲು ಕೇಂದ್ರ ಸಚಿವರು ಮರವಂತೆಯಲ್ಲಿ ಕೆಲ ತಿಂಗಳ ಹಿಂದೆ ಆರಂಭಗೊ0ಡ ಸ್ಕೈ ಡೈನಿಂಗ್ ಏರಿದರು. ಮತ್ತು ಸುತ್ತಮುತ್ತಲ ಪ್ರದೇಶಗಳ ಸೊಬಗನ್ನು ಸವಿದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸ್ಥಳೀಯಾಡಳಿತ ಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಅಭಿವೃದ್ಧಿ ಗೆ ಸಂಬ0ಧಿಸಿ ಸಚಿವರು ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಜೊತೆ ಸಭೆ ನಡೆಸಿದರು ಮತ್ತು ಪ್ರವಾಸೀ ಆಕರ್ಷಣೆ ತಾಣಗಳ ಮಾಹಿತಿ ಪಡೆದರು. ಉಡುಪಿ ಜಿಲ್ಲೆಯಲ್ಲಿ ಪ್ತವಾಸೋದ್ಯಮದ ಬೆಳವಣಿಗೆಗೆ ವಿಪುಲ ಅವಕಾಶಗಳಿರುವುದನ್ನು ಅವರು ಒಪ್ಪಿಕೊಂಡರು.ಇದಕ್ಕೂ ಮುನ್ನ ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!