ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಬಸ್ ನಿಲ್ದಾಣದ ಬಳಿ ಪುತ್ತೂರು ಮಹಿಳಾ ಠಾಣೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಹೊಂದುತ್ತಿದ್ದು ಅಲ್ಲಿದ್ದ ಅನಧಿಕೃತ ಮನೆಗಳನ್ನು ಈಗಾಗಲೇ ತೆರವು ಮಾಡಲಾಗಿದೆ. ಸದ್ಯ ಅಲ್ಲಿ ಮಹಿಳಾ ಪೊಲೀಸ್ ಠಾಣೆ ಕಟ್ಟಡವಿದ್ದು ಅದನ್ನು ತೆರವು ಮಾಡುವುದು ಅಥವಾ ಬೇರೆಡೆ ಸ್ಥಳಾಂತರ ಮಾಡಿಸುವುದಾಗಿ ಈ ಹಿಂದೆ ಶಾಸಕರು ತಿಳಿಸಿದ್ದರು. ಈ ಕಟ್ಟಡ ತೆರವುಗೊಂಡಲ್ಲಿ ದೇವಸ್ಥಾನ ಸುಂದರವಾಗಿ ರೂಪುಗೊಂಡAತಾಗುತ್ತದೆ. ಹೊಸ ಮಹಿಳಾ ಠಾಣೆಗೆ ಬಸ್ ನಿಲ್ದಾಣದ ಬಳಿ ಸ. ನಂ.,124/5ಪಿ2 ರಲ್ಲಿ 8 ಸೆಂಟ್ಸ್ ಜಾಗವನ್ನು ಶಾಸಕರ ಮನವಿ ಮೇರೆಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿದ್ದ ಮನೆಗಳನ್ನು ತೆರವುಗೊಳಿಸಿದ ಬಳಿಕ ದೇವಳಕ್ಕೆ ಅಡ್ಡವಾಗಿದ್ದ ಮಹಿಳಾ ಪೊಲೀಸ್ ಠಾಣಾ ಕಟ್ಟಡವನ್ನು ತೆರವು ಮಾಡಬೇಕಿದೆ ಎಂದು ಅನೇಕ ಭಕ್ತಾದಿಗಳು ಶಾಸಕರಲ್ಲಿ ಮೌಖಿಕ ಮನವಿಯನ್ನು ಮಾಡಿಕೊಂಡಿದ್ದರು. ಈ ಕಟ್ಟಡ ತೆರವು ಮಾಡಿದ್ದೇ ಆದಲ್ಲಿ ದೇವಸ್ಥಾನಕ್ಕೆ ಇನ್ನಷ್ಟು ಜಾಗ ಲಭ್ಯವಾಗಲಿದ್ದು ಮಾತ್ರವಲ್ಲದೆ ದೇವಸ್ಥಾನ ಹಾಗೂ ದೇವಳದ ಪವಿತ್ರ ಕೆರೆಯೂ ಅತಿ ಸುಂದರವಾಗಿ ಕಾಣಿಸಲಿದೆ. ಠಾಣಾ ಕಟ್ಟಡವನ್ನು ತೆರವು ಮಾಡಬೇಕಾದಲ್ಲಿ ಹೊಸ ಠಾಣೆಯನ್ನು ನಿರ್ಮಾಣ ಮಾಡಬೇಕಿತ್ತು. ತಾನೇ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಜಾಗ ಹುಡುಕಿದ ಶಾಸಕರು ಬಸ್ ನಿಲ್ದಾಣದ ಬಳಿಕ 8 ಸೆಂಟ್ಸ್ ಜಾಗವನ್ನು ಪಡೆಯುವಲ್ಲಿ ಸಫಲರಾದರು.

 

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇದ್ದ ಹಳೆಯ ಪೊಲೀಸ್ ಠಾಣಾ ಕಟ್ಟಡ ಈಗಿನ ಮಹಿಳಾ ಪೊಲೀಸ್ ಠಾಣೆಯನ್ನು ಬಸ್ ನಿಲ್ದಾಣದ ಬಳಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ಕಂದಾಯ ಇಲಾಖೆ ಜಾಗವನ್ನು ಗುರುತಿಸಿ ಆದೇಶವನ್ನು ಹೊರಡಿಸಿದೆ. ಕಟ್ಟಡ ನಿರ್ಮಾಣಕ್ಕೆ ಇನ್ನು ಶೀಘ್ರವೇ ಅನುದಾನವೂ ಬರುತ್ತದೆ.ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಈಗ ಇರುವ ಠಾಣೆಯನ್ನು ಕೆಡವಲಾಗುತ್ತದೆ, ಇದು ದೇವಳಕ್ಕೆ ಸೇರಿದ ಜಾಗದಲ್ಲಿರುವ ಕಾರಣ ಠಾಣೆಯ ಕಟ್ಟಡವನ್ನು ಕೆಡವಿ ಆ ಜಾಗವನ್ನು ದೇವರಿಗೆ ನೀಡಲಾಗುತ್ತದೆ. ದೇವಸ್ಥಾನದ ಜಾಗವನ್ನು ಯಾರು ಅಕ್ರಮಿಸಿಕೊಂಡರೂ ಅದನ್ನು ಬಿಡುವ ಪ್ರಶ್ನೆಯೇ ಇಲ್ಲ. ದೇವರ ಜಾಗ ದೇವರಿಗೆ ಸೇರಬೇಕು. ಬಸ್ ನಿಲ್ದಾಣದ ಬಳಿ ಆಧುನಿಕ ಶೈಲಿಯ ಹೊಸ ಮಹಿಳಾ ಪೊಲೀಸ್ ಠಾಣೆ ಶೀಘ್ರವೇ ನಿರ್ಮಾಣವಾಗಲಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆ ನಿರ್ಮಾಣವಾಗುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಂತ ಅನುಕೂಲ ಎಂಬ ಮಾತುಗಳು ಕೇಳಿ ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!