ಜನ ಮನದ ನಾಡಿ ಮಿಡಿತ

Advertisement

ಕುರುಡುಂಜೆ ಜಲಜಮ್ಮ ಹೆಗ್ಡೆ ಶತಮಾನೋತ್ಸವ ಸಂಭ್ರಮ

ಉಡುಪಿ: ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.


ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಖ್ಯಾತ ಭಜನಾ ತಂಡಗಳ ಮಹಾ ಸಮ್ಮಿಲನದಲ್ಲಿ “ಭಕ್ತ ಭಾವಧಾರೆ”, “ಮಹಾಮೃತ್ಯುಂಜಯ ಹೋಮ”, ಶ್ರೀ ಕೋದಂಡರಾಮ ಕೃಪಾಷೋಷಿತ ಹನುಮಗಿರಿ ಮೇಳದವರಿಂದ ” ಗರುಡೋದ್ಭವ ಪುರುಷಮೃಗ” ಯಕ್ಷಗಾನ ಹಾಗೂ ಕಲ್ಕುಡ, ಪಂಜುರ್ಲಿ, ವಡ್ತೆ, ಅಣ್ಣಪ್ಪ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನೆರವೇರಿತು.ಈ ಸಂದರ್ಭದಲ್ಲಿ ನೂರು ಸಂವತ್ಸರಗಳನ್ನು ಪೂರೈಸಿದ ಕುರುಡುಂಜೆ ಜಲಜಮ್ಮ ಹೆಗ್ಡೆ ಅವರನ್ನು ಬಾರ್ಕೂರು ಬಂಟರ ಮಹಾ ಸಂಸ್ಥಾನದ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಶಾಲು, ಪೇಟ, ಹಾರ, ಸನ್ಮಾನ ಪತ್ರ ಹಾಗೂ ಶತಮಾನದ ಮಾತೆ ಎಂಬ ಬಿರುದಿನೊಂದಿಗೆ ಗೌರವಿಸಿದರು.

ಬಳಿಕ ಮಾತನಾಡಿದ ಸಂತೋಷ್ ಗುರೂಜಿ‌ ಅವರು, ಮರಿಮಕ್ಕಳನ್ನ ನೋಡಿದ ಜಲಜಮ್ಮನವರಿಗೆ ಶತಮಾನದ ಮಾತೆ ಬಿರುದನ್ನು ಕೊಟ್ಟಿದ್ದೇವೆ. ಸಂಸ್ಥಾನದಲ್ಲಿ ನೋವನ್ನು ಮರೆಮಾಚಿಸುವ 50 ಹಿರಿ ಜೀವಗಳು ಇರುವುದಕ್ಕೆ ಯಾರಾದರೂ ಪುಣ್ಯಾತ್ಮರು ಸಂತೋಷಧಾಮವನ್ನು ನಿರ್ಮಾಣ ಮಾಡಿ ಅವರು ಸಂಜೆಯ ಸಮಯವನ್ನು ನಮ್ಮಂತಹ ಸಾಧು ಸಂತರ ಜೊತೆಯಲ್ಲಿ ಕಳೆಯುವಂತೆ ಅವಕಾಶವನ್ನು ಮಾಡಿಕೊಡಬೇಕು ಎನ್ನುವ ಕನಸನ್ನು ನಾವು ಕಂಡಿದ್ದೇವೆ. ಶತಮಾನದ ಮಾತೆ ಎನ್ನುವ ಬಿರುದನ್ನು ನೀಡಿರುವ ಈ ಸುಸಂದರ್ಭದಲ್ಲಿ ವೃದ್ಧಾಶ್ರಮಕ್ಕೆ ನಾಂದಿಯಾಗಿರತಕ್ಕಂತಹ ಒಂದು ಘಟಳಿಗೆಯಾಗಿ ಅವರ ಆಶೀರ್ವಾದ ಅಲ್ಲಿಗೆ ಸಿಗಲಿ ಎನ್ನುವಂತಹ ಆಶಿರ್ವಚನ ನೀಡಿದ್ದಾರೆ. ಇದೇ ವೇಳೆ ಹಿರಿ ಜೀವಗಳಿಗೆ ಸಂತೋಷಧಾಮ ಮಾಡಬೇಕು ಎನ್ನುವ ಸಂಕಲ್ಪ ಆದಷ್ಟು ಬೇಗ ಈಡೇರಲಿ ಎಂದು ಹಾರೈಸಿದ್ದಾರೆ. ಜಲಜಮ್ಮನವರನ್ನು ಅವರ ಮಕ್ಕಳು, ಮೊಮ್ಮಕ್ಕಳನ್ನು ನೋಡಿ ಎಲ್ಲರೂ ಕಲಿಯಬೇಕು. ತುಳು ನಾಡಿನ ಸಮಸ್ತ ದೈವ ದೇವರುಗಳು ಅವರ ಕುಟುಂಬಕ್ಕೆ ರಕ್ಷಣೆ ನೀಡಿ, ಸಂತೋಷವನ್ನು ನೀಡಲಿ ಎಂದು ಆಶೀರ್ವದಿಸಿದರು.ಸಮಾರಂಭದಲ್ಲಿ ನಿವೃತ್ತ ಡಿಜಿಪಿ ಕಮಲ್ ಪಂತ್, ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಉದ್ಯಮಿ ಎಚ್.ಎಸ್.ಶೆಟ್ಟಿ, ಅಂಕೋಲದ ಪ್ರಖ್ಯಾತ ನ್ಯಾಯವಾದಿ ನಾಗರಾಜ್ ನಾಯಕ್, ಜಲಜಮ್ಮ ಹೆಗ್ಡೆ ಅವರ ಪುತ್ರ ಮಂಜುನಾಥ್ ಹೆಗ್ಡೆ, ಕಿಶೋರ್ ಹೆಗ್ಡೆ, ಪುತ್ರಿ ಸರಸ್ವತಿ ಹೆಗ್ಡೆ ಉಪಸ್ಥಿತರಿದ್ದರು. ರಘುರಾಮ್ ಅವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!