ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸಣ್ಣ ನೀರಾವರಿ ಸಚಿವರಿಗೆ 38 ಕೋಟಿ ರೂ ಪ್ರಸ್ತಾವನೆ: ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಡೆಗೋಡೆ, ಕಿಂಡಿಅಣೆಕಟ್ಟು ಮತ್ತು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಕೊಳವೆ ಬಾವಿ ಮಂಜೂರಾತಿಗೆ ಆಗ್ರಹಿಸಿ ಕರ್ನಾಟಕ ಸರಕಾರದ ಸಣ್ಣ ನೀರಾವರಿ ಖಾತೆ ಸಚಿವರಾದ ಬೋಸರಾಜು ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.

ಶುಕ್ರವಾರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಡೆಗೋಡೆ ಬೇಡಿಕೆ ಹೆಚ್ಚಿನ ಸಂಖ್ಯೆಯಲ್ಲಿದ್ದು ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಅನುದಾನವನ್ನು ನೀಡುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಸಣ್ಣ ಹೊಳೆ, ದೊಡ್ಡ ಹೊಳೆಗಳಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವುದು ಮತ್ತು ಬೇಸಿಗೆಯಲ್ಲಿ ನೀರು ಸಂಗ್ರಹಣೆಗೆ ಉಪಯುಕ್ತವಾಗುವ ರೀತಿಯಲ್ಲಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡಿದಲ್ಲಿ ಕೃಷಿ ಚಟುವಟಿಕೆಗೆ ಪ್ರಯೋಜನವಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ವಿಪರೀತ ಉಷ್ಣಾಂಶ ಇರುವ ಕಾರಣ ಬೇಸಿಗೆಯ ಕೊನೇ ತಿಂಗಳಲ್ಲಿ ಹೊಳೆಗಳು , ನದಿಗಳು ಬತ್ತಿ ಹೋಗುತ್ತಿದೆ. ನೀರು ಸಂಗ್ರಹಣೆ ವ್ಯವಸ್ಥೆ ಮಾಡದೇ ಇದ್ದಲ್ಲಿ ಕೃಷಿಗೆ ತೊಂದರೆಯಾಗಲಿದ್ದು ಈ ನಿಟ್ಟಿನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಿ ಕಿಂಡಿಅಣೆಕಟ್ಟಿಗೆ ಅನುದಾನ ಮಂಜೂರು ಮಾಡುವಂತೆ ಸಚಿವರಲ್ಲಿ ಶಾಸಕರು ಮನವಿ ಮಾಡಿದ್ದಾರೆ. ಕ್ಷೇತ್ರದ ಎಸ್ ಸಿ ಮತ್ತು ಎಸ್ ಟಿ ಸಮುದಾಯದಿಂದ ಕೊಳವೆ ಬಾವಿಗಳ ಬೇಡಿಕೆ ಇದ್ದು ಈ ಹಿಂದೆ ಸರಕಾರ ಹಲವು ಕೃಷಿ ದಲಿತ ಕುಟುಂಬಳಿಗೆ ಕೊಳವೆ ಬಾವಿಯನ್ನು ಮಂಜೂರು ಮಾಡಿದ್ದರೂ ಇನ್ನೂ ಬೇಡಿಕೆ ಇರುವ ಕಾರಣ ಇಲಾಖೆಯಿಂದ ಕೊಳವೆ ಬಾವಿ ಮಂಜೂರು ಮಾಡಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಬೇಡಿಕೆಗಳ ಪಟ್ಟಿಯ ಪ್ರಸ್ತಾವನೆಯನ್ನು ಸಚಿವರಿಗೆ ನೀಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!