ಜನ ಮನದ ನಾಡಿ ಮಿಡಿತ

Advertisement

ಚಿಕ್ಕೋಡಿ: ಮದುವೆ ಆದ ಮೂರೇ ದಿನಕ್ಕೆ ದೇಶ ಕಾಯಲು ಪತಿಯನ್ನು ಕಳುಹಿಸಿದ ಪತ್ನಿ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಲ್ಲಿ ಮದುವೆಯಾದ ಮೂರೇ ದಿನಕ್ಕೆ ಸೈನಿಕರೊಬ್ಬರು ದೇಶ ಸೇವೆಗೆ ವಾಪಸ್ ತೆರಳಿದ್ದಾರೆ.

ಹೌದು, ಮಹಾರಾಷ್ಟ್ರದ ಜಳಗಾಂವ್‌ನ ಪಾಚೋರಾದ ಯೋಧ ಮನೋಜ್ ಪಾಟೀಲ್ ಮದುವೆ ಇದೇ ಮೇಲೆ 5ರಂದು ಅದ್ದೂರಿಯಾಗಿ ನೆರವೇರಿತು. ಇತ್ತ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದ್ರೆ, ಅತ್ತ ಭಾರತ-ಪಾಕ್ ಗಡಿಯಲ್ಲಿ ಆಕ್ರಮಣಕಾರಿ ದಾಳಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಕುಮಾರ್‌ಗೆ ತುರ್ತಾಗಿ ಸೇನೆಯಿಂದ ಕರೆ ಬಂದಿದೆ. ಮಹಾರಾಷ್ಟ್ರದ ಮನೋಜ್ ಪಾಟೀಲ್ ಹಾಗೂ ನಾಚಂಖೇಡೆಯ ರಾಮಚಂದ್ರ ಪಾಟೀಲ್ ಅವರ ಪುತ್ರಿ ಯಾಮಿನಿ ಅವರಿಗೆ ಮೇ.5 ರಂದು ಅದ್ದೂರಿ ಮದುವೆ ನಿಶ್ಚಯವಾಗಿತ್ತು. ಇದರಿಂದಾಗಿ ಮನೋಜ್ ರಜೆ ಹಾಕಿ ಹಳ್ಳಿಗೆ ಬಂದಿದ್ರು. ಇತ್ತ ಮದುವೆ ಸಂಭ್ರಮದ ನಡುವೆಯೇ ಯೋಧ ಮನೋಜ್ ಪಾಟೀಲ್ ಅವರಿಗೆ ಸೇನೆಯಿಂದ ಕರೆ ಬಂದಿತ್ತು. ತುರ್ತಾಗಿ ಸೇನೆಯಲ್ಲಿ ಸೇರಿಕೊಳ್ಳುವಂತೆ ಸೂಚಿಸಲಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಯುದ್ಧದ ಆತಂಕ ಶುರುವಾಯಿತು.

ಇತ್ತ ಮದುವೆಯಾದ ಮೂರನೇ ದಿನ ಮಗನನ್ನ ಸೇನೆಗೆ ಕಳುಹಿಸಬೇಕಲ್ಲಾ ಎಂದು ಪೋಷಕರು ಚಿಂತಿತರಾಗಿದ್ರೆ, ಪತಿಯೊಂದಿಗೆ ಜೀವನದ ಸುಂದರ ಕನಸು ಕಂಡಿದ್ದ ಪತ್ನಿ ಯಾಮಿನಿ ಕಣ್ಣೀರಿಡುತ್ತಾ ಮೌನಕ್ಕೆ ಜಾರಿದ್ದರು. ಈ ವೇಳೆ ಮನೋಜ್ ಪಾಟೀಲ್ ಏನು ಮಾಡಲಾಗದೇ ಸೇನೆಗೆ ಹೊರಟು ನಿಂತ್ರೆ, ಯೋಧನ ಕೈ ಹಿಡಿದ ಸಂಗಾತಿ ಆತನಿಗೆ ಧೈರ್ಯ ತುಂಬುತ್ತಾ ನನಗೆ ದೇಶ ಸೇವೆ ಮುಖ್ಯ. ನನ್ನ ಕುಂಕುಮವನ್ನು ಗಡಿಗೆ ಕಳಿಸುತ್ತಿರುವುದು ನನಗೆ ಹೆಮ್ಮೆ ಇದೆ ಎಂದು ಕಣ್ಣೀರು ಹಾಕಿದ್ದಾರೆ. ಇದೀಗ ಮೇ.8ನೇ ತಾರೀಕು ಮನೋಜ್ ಪಾಟೀಲ್ ದೇಶ ಸೇವೆಗೆ ಹೊರಡುವ ಸಮಯ ಬಂದೇ ಬಿಟ್ಟಿತು. ಒಂದು ಕಡೆ ಮನೆಯವರು ಮದುವೆಯ ಮೂರನೇ ದಿನಕ್ಕೆ ಗಡಿಗೆ ಕಳುಹಿಸಲು ಇಷ್ಟವಿಲ್ಲದಿದ್ದರೂ,ದೇಶ ಸೇವೆಯೇ ಮುಖ್ಯ ಅಂತ ಮಗನ ಜೊತೆ ನಿಂತರು. ಇತ್ತ ಪತ್ನಿ ಕೂಡ ಗಂಡನಿಗೆ ಧೈರ್ಯ ಹೇಳುತ್ತಾ ರೈಲ್ವೇ ನಿಲ್ದಾಣದ ಕಡೆಗೆ ಹೊರಟು ಬಿಟ್ಟರು. ಯೋಧ ಮನೋಜ್ ಪಾಟೀಲ್ ಅರಿಶಿನ ಹಚ್ಚಿದ ದೇಹ, ಕೈಯಲ್ಲಿ ಮೆಹಂದಿಯೊAದಿಗೆ ಗಡಿಗೆ ದೇಶ ಸೇವೆಗೆ ಹೊರಟರು. ಈ ವೇಳೆ ಪತ್ನಿ ದೇಶ ಸೇವೆಗೆ ಹೊರಡುತ್ತಿರುವ ಪತಿಗೆ ಕಣ್ಣೀರ ವಿದಾಯ ಹೇಳಿದ್ದು, ಒಂದು ಕ್ಷಣ ಇಡೀ ರೈಲ್ವೇ ನಿಲ್ದಾಣವೇ ಕಣ್ಣೀರ ಕಡಲಲ್ಲಿ ಮುಳುಗಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!