ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕೊಲೆಗಳು ಆಗುತ್ತಲೇ ಇರುತ್ತವೆ; ಹತ್ಯೆಯಾದವರ ಮನೆಗೆ ಸರಕಾರದ ಪ್ರತಿನಿಧಿಗಳು ಹೋಗಬೇಕೆಂದಿಲ್ಲ : ದಿನೇಶ್ ಗುಂಡೂರಾವ್

‘ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಂಗಳೂರಿನಲ್ಲಿ ಇಂದು (ಶನಿವಾರ)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಬಜಪೆ ಬಳಿ ಈಚೆಗೆ ಹತ್ಯೆಗೀಡಾದ ಹಿಂದುತ್ವ ಪರ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದರು.

ಪೊಲೀಸರು ಅಪರಾಧಿಗಳನ್ನು ಈಗಾಗಲೇ ಪತ್ತೆ ಹಚ್ಚಿದ್ದಾರೆ. ಮುಂದೆ ಎನ್ಐಎ ತನಿಖೆಗೆ ಇದನ್ನು ನೀಡಬೇಕೋ? ಬೇಡವೋ? ಎನ್ನುವ ತೀರ್ಮಾನವನ್ನು ಗೃಹ ಇಲಾಖೆ ತೆಗೆದುಕೊಳ್ಳಲಿದೆ. ಸರಕಾರದಿಂದ ಈಗಾಗಲೇ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಉಳಿದ ಅಪರಾಧಿಗಳ ಪತ್ತೆ ಕಾರ್ಯವು ನಡೆಯುತ್ತಲೇ ಇದೆ. ವಿರೋಧಿಗಳ ಊಹಾಪೂಹಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಮೂಲವನ್ನು ಭೇದಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಸರಕಾರ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದೆ. ಯಾರಿಗೂ ಕೂಡ ರಕ್ಷಣೆಯನ್ನು ನೀಡುವ ಕೆಲಸವನ್ನು ಸರಕಾರ ಮಾಡುತ್ತಾ ಇಲ್ಲ. ದಿಟ್ಟ ಕ್ರಮದಿಂದ ಅಪರಾಧಿಗಳ ಪತ್ತೆಯಾಗಿದೆ. ಯಾವ ಪುರಾವೆಗಳು ಇಲ್ಲದೆ ಮಾತನಾಡುವವರ ಕುರಿತು ಚಿಂತಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹತ್ಯೆ ನಡೆದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ. ಕೆಲವೊಬ್ಬರು ನಕಲಿ ಹೆಸರಲ್ಲಿ ಖಾತೆ ಬಳಸುತ್ತಿದ್ದು, ಅವರು ಯಾರು ಎಂಬುದು ತಕ್ಷಣಕ್ಕೆ ಗೊತ್ತಾಗುವುದಿಲ್ಲ. ಸಂಬಂಧಿಸಿದ ಸಂಸ್ಥೆಗಳಿಗೆ ಪತ್ರ ಬರೆದು ಮಾಹಿತಿ ತಿಳಿದುಕೊಂಡು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಈ ಕ್ಷಣ ಮಾತನಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!