ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಾಮಿಡಿಯನ್ ರಾಕೇಶ್ ಪೂಜಾರಿ ಅಂತಿಮ ಯಾತ್ರೆ – ಹಲವು ನಟರು, ಅಭಿಮಾನಿಗಳಿಂದ ಅಂತಿಮ‌ ನಮನ

ಉಡುಪಿ: ನಿನ್ನೆ ರಾತ್ರಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಮೃತದೇಹ ಕೆಮ್ಮಣ್ಣುವಿನ ಪಡುತೋನ್ಸೆಯ ಮನೆಗೆ ತಲುಪಿದೆ. ಮೃತ ಕಾಮಿಡಿ ಕಿಲಾಡಿ- 3ರ ವಿನ್ನರ್ ರಾಕೇಶ್ ಮನೆಗೆ ನೂರಾರು ಅಭಿಮಾನಿಗಳು, ಗ್ರಾಮಸ್ಥರು, ಕುಟುಂಬಸ್ಥರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಕಿರುತರೆ ನಟ ನಟಿಯರು, ರಾಕೇಶ್ ಆಪ್ತರು ಕೂಡ ಅಂತಿಮ ನಮನ ಸಲ್ಲಿಸಿದರು.

ತಾಯಿ ಶಾಂಭವಿ, ಸಹೋದರಿ ರಕ್ಷತಾ, ರಾಕೇಶ್ ಅವರ ಅಕಾಲಿಕ ಮರಣದಿಂದ ತೀವ್ರ ನೊಂದಿದ್ದು ಮನೆಯಲ್ಲಿ ಸೂತಕದ ವಾರಾವರಣ ನಿರ್ಮಾಣವಾಗಿದೆ. ನಟಿ ನಯನ, ಸೂರ್ಯ ಕುಂದಾಪುರ, ದೀಕ್ಷಿತ್ ಪ್ರವೀಣ್‌, ದೀಪಿಕಾ, ವಾಣಿ, ಉಮೇಶ್ ಕಿನ್ಮಾರ, ಸೂರಜ್, ಜೀ ಮೆಂಟ‌ರ್ ವಿಜಯ್ ಶೆಟ್ಟಿ ಮತ್ತಿತರ ಗಣ್ಯರು, ನಟರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಸದ್ಯ ಕೆಮ್ಮಣ್ಣುವಿನ ಮನೆಯಲ್ಲಿ ಮೃತದೇಹದ ಅಂತಿಮ ವಿಧಿವಿಧಾನ ನಡೆಯುತ್ತಿದ್ದು ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!