ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಘಟನೆ ನಡೆದಿದೆ ತಿಳಿದು ಬಂದಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



