ಜನ ಮನದ ನಾಡಿ ಮಿಡಿತ

Advertisement

ಮೇ 20ರಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಮುಷ್ಕರ..!

ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮೇ 20 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಅವರು, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರವು ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ. ಈ ಮುಷ್ಕರದಲ್ಲಿ ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಗೊಂಡು, ಅಜ್ಜರಕಾಡು ಹುತಾತ್ಮ ಸ್ಮಾರಕದ ಮುಂಭಾಗ ಕೊನೆಗೊಳ್ಳಲಿದೆ. ನಂತರ ಸಭೆ ನಡೆಯಲಿದೆ. ಹಾಗೆಯೇ ಕುಂದಾಪುರದಲ್ಲಿ ಶಾಸ್ತ್ರಿ ವೃತ್ತದಿಂದ ಆರಂಭಗೊಂಡು, ಬಸ್ ನಿಲ್ದಾಣವರೆಗೆ ಸಾಗಿ, ಶಾಸ್ತ್ರಿ ಸರ್ಕಲ್ ಗೆ ವಾಪಾಸಾಗಿ ಸಭೆ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಮೇ.17 ರಂದು ಉಡುಪಿ, ಕುಂದಾಪುರ, ಬೈಂದೂರು ಭಾಗಗಳಲ್ಲಿ ಪಾದಯಾತ್ರೆಯ ಮೂಲಕ ಕರಪತ್ರವನ್ನು ಹಂಚಲಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಪ್ರ‌‌‌.ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಶೇಖರ್ ಬಂಗೇರಾ, ಕವಿರಾಜ್‌.ಎಸ್‌.ಕೋಟ್ಯಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!