ಮೂಲ್ಕಿ: ಮನೆಯ ಹಿಂದಿನ ಚರಂಡಿಯ ಗುಂಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.
ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬುವವರ ಮನೆಯ ಹಿಂಭಾಗದ ಡ್ರೇನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ 4 ತಿಂಗಳಿಂದ ಮೃತ ಮಹಿಳೆ ನಾಗಮ್ಮ ಕಲ್ಲಾಪುವಿನಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಇದೀಗ ಮನೆಗೆ ಬಂದ ವೇಳೆ ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡ್ರೇನೇಜ್ ಪಿಟ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.
ಗುಂಡಿಯ ಮೇಲೆ ಲೋಹದ ಶೀಟ್ ಹಾಕಲಾಗಿದ್ದು, ಗುಂಡಿಯೊಳಗೆ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಚಿಕ್ಕ ಚರಂಡಿಯ ಗುಂಡಿಯೊಳಗೆ ಮಹಿಳೆ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖರಕಾರಣ ತಿಳಿದುಬರಬೇಕಿದೆ.



