ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಾಜ್ಯಾದ್ಯಂತ ಅಬ್ಬರಿಸಿದ ಮಳೆ; ಕರ್ನಾಟಕದಲ್ಲಿ ಸಿಡಿಲಿಗೆ ಒಂದೇ ದಿನ ಏಳು ಮಂದಿ ಬಲಿ

ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಕರಾವಳಿ, ಮಲೆನಾಡು, ಒಳನಾಡುಗಳಲ್ಲಿ ವಿವಿಧೆಡೆ ಬೆಳೆಗಳಿಗೆ ಹಾನಿಯಾಗಿದೆ. ಜೋರು ಗಾಳಿ ಮಳೆಗೆ ಬೆಳೆಗಳು ನೆಲಕಚ್ಚಿವೆ. ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಜಮೀನಿನ ಕೆಲಸದಲ್ಲಿ ತೊಡಗಿದ್ದ ಬೀರಪ್ಪ (45) ಹಾಗೂ ಅವರ ಅಣ್ಣನ ಮಗ ಸುನೀಲ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಸನಗೌಡ (40) ಹಾಗೂ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ಯಂಕಪ್ಪ ಜಾಡಿ (45) ಮೃತರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಲ್ಲಪ್ಪ ಗುರಶಾಂತಪ್ಪ ತಾಳಿಕೋಟಿ (47) ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಹಾವೇರಿಯಲ್ಲೂ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಲದ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು 29 ವರ್ಷದ ಯುವ ರೈತ ಸುನೀಲ ಸುರೇಶಪ್ಪ ಕಾಳೇರ ಸಾವನಪ್ಪಿದ ಘಟನೆ ರಟ್ಟೀಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!