ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ – ಗುಂಡೂರಾವ್

ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.

ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

ಮುಂದುವರೆಸಿ ಮಾತನಾಡಿದ ಅವರು 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್​​ಎನ್​​ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್​ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!