ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಾಕುವಿನಿಂದ ಇರಿದ ಪ್ರಕರಣ; ಹಲವರನ್ನು ವಶಕ್ಕೆ ಪಡೆದುಕೊಂಡ ಬಂಟ್ವಾಳ ಪೊಲೀಸರು

ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಈ ಹಿಂದೆ ಗಲಾಟೆಗಳು ನಡೆದಿದೆ.

ಅದರ ಮುಂದುವರಿದ ಭಾಗ ಕೊಲೆಯತ್ನ ನಡೆದಿದೆಯಾ? ಎಂಬ ಸಂಶಯ ಪೋಲೀಸರಿಗೆ ವ್ಯಕ್ತವಾಗಿದ್ದು, ಇದಕ್ಕೆ ಪೂರಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಪೋಲೀಸ ತನಿಖೆ ಪ್ರಾರಂಭವಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಮೀದ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಶಸ್ತ್ರ ಚಿಕಿತ್ಸೆ ನಡೆದಿದೆ ಎನ್ನಲಾಗಿದೆ. ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ನಿಂತುಕೊಂಡಿದ್ದ ಹಮೀದ್ ಅವರನ್ನು ಬೈಕ್‍ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!