ಜನ ಮನದ ನಾಡಿ ಮಿಡಿತ

Advertisement

ಗುಂಡ್ಯ: ರಾ.ಹೆ.ಗುಂಡ್ಯ ಸಮೀಪ ಕೆಎಸ್‌ಆರ್‌ಟಿಸಿ ಬಸ್-ಲಾರಿ ಮುಖಾಮುಖಿ ಢಿಕ್ಕಿ..!;ಚಾಲಕ ಸೇರಿ ನಾಲ್ವರಿಗೆ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ. ಸ್ಥಳೀಯರು ವಾಹನಗಳನ್ನು ತೆರವುಗೊಳಿಸಿ, ಸಂಚಾರ ಸುಗಮಗೊಳಿಸಲು ಹರಸಾಹಸಪಡುತ್ತಿದ್ದಾರೆ. ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸ್ ಚಾಲಕ ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಪ್ರಣಯ್ ಮತ್ತು ಕನಕಪುರ ನಿವಾಸಿ ಮಂಜುನಾಥ ಗಾಯಗೊಂಡವರಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!