ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೊಸಪೇಟೆಯಲ್ಲಿ ಮೇ 20ರಂದು “ಕಾಂಗ್ರೆಸ್ ಸಾಧನಾ ಸಮಾವೇಶ”

ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು ಮೂರು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.

ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಲು ನಾವು ಪ್ರಯತ್ನಿಸುತ್ತೇವೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣದ ಕೊರತೆಯಿಲ್ಲ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. 2024-25ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂಪಾಯಿಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲು ಸರಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಹೇಳಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಬಿಪಿನ್ ಚಂದ್ರಪಾಲ್ ನಕ್ರೆ, ಮಹಾಬಲ ಕುಂದರ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!