ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ

ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ. ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್‌ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ. ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!