ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ

ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ ನಡೆಯಿತು.

ದೇಶದ ಗಡಿಭಾಗದಲ್ಲಿ ಶತ್ರುರಾಷ್ಟ್ರಗಳ ಸವಾಲುಗಳನ್ನೆದುರಿಸಿ ಯುದ್ಧ ಸನ್ನದ್ಧಸ್ಥಿತಿಯಲ್ಲಿ ದಿಟ್ಟತನದಿಂದ ದೇಶವನ್ನು ಕಾಯುತ್ತಾ ಸೈನಿಕರ ಯೋಗಕ್ಷೇಮ ಮತ್ತು ದೇಶದ ಸುರಕ್ಷೆ ಸಮೃದ್ಧಿಗಾಗಿ ಪ್ರಾರ್ಥಿಸಿ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಂಕಲ್ಪನಾನುಸಾರ ಈ ಯಾಗ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪ್ರಾಚೀನ ಸ್ಕಂದಾಲಯ ಮುಚ್ಚುಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಹಾಸುದರ್ಶನ ಮಂತ್ರ ಯಾಗ ನೆರವೇರಿತು. ವಿದ್ವಾನ್ ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ವಿದ್ವಾನ್ ಸಗ್ರಿ ಆನಂದತೀರ್ಥಾಚಾರ್ಯರು, ವಿದ್ವಾನ್ ಲಕ್ಷ್ಮೀನಾರಾಯಣ ತಂತ್ರಿ ಮತ್ತು ವಿದ್ವಾನ್ ಕೆ ಜೆ ಪವನಕುಮಾರರು ಯಾಗವನ್ನು ನೆರವೇರಿಸಿದ್ರು. ಪೂರ್ಣಾಹುತಿಯಲ್ಲಿ ಪಾಲ್ಗೊಂಡ ಶ್ರೀಗಳು ದೇವಸೇನಾಧಿಪತಿಯಾದ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಡೆಸಿದ ಈ ಯಾಗದ ಪೂರ್ಣ ಶ್ರೇಯಸ್ಸು ದೇಶದ ಗಡಿಕಾಯುವ ಸೈನಿಕರ ಶ್ರೇಯಸ್ಸಿಗಾಗಿ ದೇಶದ ಸುರಕ್ಷತೆಗಾಗಿ ಅರ್ಪಿಸೋಣ. ಯಾವುದೇ ಉದ್ವಿಗ್ನ ಪರಿಸ್ಥಿತಿಯಲ್ಲೂ ಎದೆಗುಂದದೇ ದೇಶಕ್ಕೆ ಜಯ ತಂದುಕೊAಡುವ ಅದ್ಭುತ ಶಕ್ತಿಯನ್ನು ಸೈನಿಕರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!