ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಸ್ಪೀಕರ್ ಖಾದರ್‌ಗೆ ಬೀಳ್ಕೊಡುಗೆ

ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಬಳಿಕ ಮಾತನಾಡಿದ ಅವರು, ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!