ಜನ ಮನದ ನಾಡಿ ಮಿಡಿತ

Advertisement

ಯೆನೆಪೊಯ ಮೆಡಿಕಲ್ ಕಾಲೇಜು 21ನೇ ಪದವಿ ಪ್ರದಾನ ಸಮಾರಂಭ

ಉಳ್ಳಾಲ: ವೈದ್ಯಕೀಯ ಎಂಬ ಪವಿತ್ರ ವೃತ್ತಿಗೆ ಕಾಲಿಟ್ಟಾಗ, ದಯೆ, ನಿಷ್ಠೆ ಮತ್ತು ಜೀವನಪೂರ್ತಿ ಕಲಿಯುವ ಮನೋಭಾವನೆ ನಿಮ್ಮ ಮಾರ್ಗದರ್ಶಕ ತತ್ವಗಳಾಗಲಿ. ಮಾನವತೆಗೆ ಸೇವೆ ಸಲ್ಲಿಸುವಲ್ಲಿ ಮತ್ತು ಆರೋಗ್ಯ ವಲಯವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ನಿಮ್ಮ ಪ್ರಯಾಣ ಸಾಧನಾಪೂರ್ಣವಾಗಲಿ. ಯೆನೆಪೊಯ ಮೆಡಿಕಲ್ ಕಾಲೇಜಿನ 21ನೇ ಪದವಿ ಪ್ರದಾನ ದಿನಾಚರಣೆಯಲ್ಲಿ ಭಾಗವಹಿಸುವುದು ಮತ್ತು ನಿಮ್ಮ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸಾಕ್ಷಿಯಾಗುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ ಎಂದು ವಿಶಾಖಪಟ್ಟಣದ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಉಮೇಶ್ ಮಹಾಂತ್ ಶೆಟ್ಟಿ ಅಭಿಪ್ರಾಯಪಟ್ಟರು.

ದೇರಳಕಟ್ಟೆಯ ಯೆನೆಪೊಯ ವೈದ್ಯಕೀಯ ಕಾಲೇಜು (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ), ಇದರ ಯೆಂಡ್ಯುರನ್ಸ್ ಝೋನ್‌ನಲ್ಲಿ ಜರಗಿದ 21ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರಧಾನ ನೆರವೇರಿಸಿ ಮಾತನಾಡಿದರು.

ಕರ್ನಾಟಕ ವೈದ್ಯಕೀಯ ಮಂಡಳಿಯ ಅಧ್ಯಕ್ಷ, ಬಳ್ಳಾರಿ ಪೃಥ್ವಿ ಮಕ್ಕಳ ಆಸ್ಪತ್ರೆಯ ತಜ್ಞವೈದ್ಯ ಡಾ.ಯೋಗಾನಂದ ರೆಡ್ಡಿ ವೈ.ಸಿ ಮುಖ್ಯ ಅತಿಥಿಯಾಗಿ ಮಾತನಾಡಿ ಆಧುನಿಕ ವೈದ್ಯಕೀಯದಲ್ಲಿ ಮಾನವೀಯತೆ ಮತ್ತು ವೈಜ್ಞಾನಿಕ ಚಿಂತನೆಯ ಮಹತ್ವವನ್ನು ಅರಿಯಬೇಕಿದೆ ಎಂದರು.

ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಎಂ. ಎಸ್. ಮೂಸಬ್ಬ ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರಹಮಾನ್ ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು. ಡೀನ್ ಡಾ. ಅಭಯ ನಿರ್ಗುಡೆ ಉಪಸ್ಥಿತರಿದ್ದರು.
ಡಾ. ಪ್ರಕಾಶ್ ಸಲ್ದಾನ್ಹ ವಂದಿಸಿದರು. ಬಳಿಕ ವಿದ್ಯಾರ್ಥಿಗಳ ನೃತ್ಯ, ಸಂಗೀತ, ನಾಟಕ ಮತ್ತು ಇತರ ಪ್ರತಿಭೆಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನ್ಯಾಕ್ ವತಿಯಿಂದ ಎ+ ಗ್ರೇಡ್ ಹೊಂದಿರುವ ಹಾಗೂ 2024ರ ಎನ್‌ಐಆರ್‌ಎಫ್ ರ‍್ಯಾಂಕಿAಗ್‌ನಲ್ಲಿ 95ನೇ ಸ್ಥಾನದಲ್ಲಿರುವ ಯೆನೆಪೊಯ ಮೆಡಿಕಲ್ ಕಾಲೇಜು, ಉತ್ತಮ ವೈದ್ಯಕೀಯ ಶಿಕ್ಷಣ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯಲ್ಲಿ ತನ್ನ ಮಟ್ಟಮೇಲಿನ ಕಾರ್ಯಕ್ಷಮತೆಯನ್ನು ಮುಂದುವರೆಸುತ್ತಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!