ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಆಂದ್ರಕ್ಕೆ ಕರ್ನಾಟಕದಿಂದ 4 ಕುಮ್ಕಿ ಆನೆಗಳ ಹಸ್ತಾಂತರ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರು ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ.

ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗುವ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.

ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಮಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ ಸೇರಿದಂತೆ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದರು.

ರಾಜ್ಯದ ಆನೆಗಳನ್ನು ನೆರೆಯ ರಾಜ್ಯಕ್ಕೆ ಕಳುಹಿಸಲು ಪ್ರಮುಖವಾದ ಕಾರಣ ಅರಣ್ಯ ಭಾಗದಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ತಪ್ಪಿಸುವುದಾಗಿದೆ .

ಪ್ರಾಣಿಗಳನ್ನು ಹಿಡಿಯಲು ಈ ಕುಮ್ಮಿ ಆನೆಗಳನ್ನು ಬಳಕೆ ಮಾಡಲಾಗುತ್ತದೆ. ದುಬಾರೆ ಸೇರಿದಂತೆ ಬೇರೆ ಬೇರೆ ಕಡೆ ಈ ಆನೆಗಳಿಗೆ ತರಬೇತಿ ನೀಡಲಾಗಿದೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಪ್ಪಿಸಲು ಪಳಗಿಸಿದ ಕುಮ್ಮಿ ಆನೆಗಳನ್ನೇ ಆಂಧ್ರಕ್ಕೆ ಹಸ್ತಾಂತರ ಮಾಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!