ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಆಂದ್ರಕ್ಕೆ ಕರ್ನಾಟಕದಿಂದ 4 ಕುಮ್ಕಿ ಆನೆಗಳ ಹಸ್ತಾಂತರ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರು ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ.

ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗುವ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.

ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಮಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ ಸೇರಿದಂತೆ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದರು.

ರಾಜ್ಯದ ಆನೆಗಳನ್ನು ನೆರೆಯ ರಾಜ್ಯಕ್ಕೆ ಕಳುಹಿಸಲು ಪ್ರಮುಖವಾದ ಕಾರಣ ಅರಣ್ಯ ಭಾಗದಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ತಪ್ಪಿಸುವುದಾಗಿದೆ .

ಪ್ರಾಣಿಗಳನ್ನು ಹಿಡಿಯಲು ಈ ಕುಮ್ಮಿ ಆನೆಗಳನ್ನು ಬಳಕೆ ಮಾಡಲಾಗುತ್ತದೆ. ದುಬಾರೆ ಸೇರಿದಂತೆ ಬೇರೆ ಬೇರೆ ಕಡೆ ಈ ಆನೆಗಳಿಗೆ ತರಬೇತಿ ನೀಡಲಾಗಿದೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಪ್ಪಿಸಲು ಪಳಗಿಸಿದ ಕುಮ್ಮಿ ಆನೆಗಳನ್ನೇ ಆಂಧ್ರಕ್ಕೆ ಹಸ್ತಾಂತರ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!