ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಂಗಳೂರು ಬೆಂಗಳೂರು ರಾ.ಹೆ. ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆ..!

ವಾಯುಭಾರ ಕುಸಿತಕ್ಕೆ ಸುರಿದ ಬಾರಿ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕಲ್ಲಡ್ಕ ರಸ್ತೆ ಕೆಸರು ಗದ್ದೆಯಾದ ದೃಶ್ಯ ಕಂಡು ಬಂದಿದೆ.

ಅವಧಿಗೆ ಮುನ್ನ ಹಠಾತ್ ಚಂಡಮಾರುತದ ಪರಿಣಾಮ ರಾತ್ರಿಯಿಂದಲೇ ವರುಣನ ಆರ್ಭಟ ಜೋರಾಗಿ ಇತ್ತು. ನಿರಂತರವಾಗಿ ಸುರಿದ ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ಹರಿಯುವ ದೃಶ್ಯ ಅಲ್ಲಲ್ಲಿ ಕಂಡು ಬಂತು.

ಬಿ.ಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಧ್ಯೆ ಅಲ್ಲಲ್ಲಿ ಬಾಕಿಯಾಗಿದ್ದು, ಮೆಲ್ಕಾರ್ ಸಮೀಪದ ನರಹರಿ ಪರ್ವತದ ಮುಂಭಾಗದ ಕಾಮಗಾರಿ ಒಂದನ್ನು ಹೊರತುಪಡಿಸಿ ಬಿಸಿರೋಡಿನಿಂದ ಕಲ್ಲಡ್ಕವರೆಗೆ ಮೇ ಅಂತ್ಯದಲ್ಲಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ನಡೆಸುತ್ತಿರುವ ಕೆ.ಎನ್.ಆರ್.ಸಿ. ಕಂಪೆನಿಯವರು ತಿಳಿಸಿದ್ರು. ನರಹರಿ ಭಾಗದಲ್ಲಿ ತಡೆಗೋಡೆ ಮತ್ತು ಬಂಡೆಕಲ್ಲು ಹೊಡೆದು ರಸ್ತೆ ನಿರ್ಮಾಣ ಮಾಡುವ ವೇಳೆ ವಿಳಂಭವಾಗಬಹುದು ಹಾಗಾಗಿ ಮಳೆಗಾಲ ಕಡಿಮೆಯಾದ ಬಳಿಕ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!