ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕಾರ್ನಾಡ್ ಬೈಪಾಸ್ ಬಳಿ ಕಾರುಗಳ ನಡುವೆ ಅಪಘಾತ…!

ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿ ಕಾರಿನ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಪು ಕಡೆಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಕಾರ್ನಾಡ್ ಬೈಪಾಸ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಎರೆಟಿಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊAಡಿದ್ದು ಎರೆಟಿಗ ಕಾರಿಗೆ ಹಾನಿಯಾಗಿದೆ. ಅಪಘಾತದಿಂದ ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರಾದ ಕಾಪು ಮಜೂರು ನಿವಾಸಿಗಳಾದ ಸುಳ್ಯ ನಿವಾಸಿ ಜೈನಾಬಿ ಮತ್ತು ಮೈಮುನಾ ಹಾಗೂ ಎರೆಟಿಗ ಕಾರು ಚಾಲಕ ಸುಳ್ಯ ನಿವಾಸಿ ಪ್ರಶಾಂತ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ತೀವ್ರತೆಗೆ ಎರಟಿಗ ಕಾರು ಮಂಗಳೂರಿನತ್ತ ಮುಖ ಮಾಡಿ ನಿಂತಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡ್ ಬೈಪಾಸ್ ಬಳಿ ನಿರಂತರ ಅಪಘಾತ ನಡೆಯುತ್ತಿದ್ದು ವಾಹನ ಚಾಲಕರು ಎಚ್ಚರಿಕೆಯಿಂದ ಚಲಿಸಬೇಕಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!