ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: 9ನೇ ತರಗತಿ ವಿದ್ಯಾರ್ಥಿಯಿಂದ ಸಹಪಾಠಿಗೆ ಚೂರಿ ಇರಿತ

ಉಳ್ಳಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೋರ್ವ ಇನ್ನೊಬ್ಬ ವಿದ್ಯಾರ್ಥಿಗೆ ಚೂರಿ ಇರಿದ ಘಟನೆಯೊಂದು ಉಳ್ಳಾಲದಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಎಂಬಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಸಣ್ಣಪುಟ್ಟ ಮಾರಾಮಾರಿ ನಡೆದು ಓರ್ವ ವಿದ್ಯಾರ್ಥಿ ಮತ್ತೋರ್ವ ವಿದ್ಯಾರ್ಥಿಯ ಮೇಲೆ ಚಾಕು ಎಸೆದ ಘಟನೆ ಬುಧವಾರ ನಡೆದಿದೆ.

ಮಧ್ಯಾಹ್ನದ ಊಟದ ಸಮದಲ್ಲಿ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದು, ಬಟ್ಟೆಯಲ್ಲಿ ಕಲೆ ಆಯಿತೆಂದು ಕೋಪಗೊಂಡ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಯ ಕೆನ್ನೆಗೆ ಹೊಡೆದಿದ್ದಾನೆ. ಪೆಟ್ಟು ತಿಂದ ವಿದ್ಯಾರ್ಥಿ ಕ್ರೋದದಿಂದ ಬ್ಯಾಗಿನಿಂದ ಚೂರಿ ತೆಗೆದು ವಿದ್ಯಾರ್ಥಿ ಮೇಲೆ ಎಸೆದ ಪರಿಣಾಮ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ‌ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭೇಟಿ ನೀಡಿ ಹುಡುಗನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದು ಇಂದು ತನಿಖೆ ಮುಂದುವರಿಸಿದ್ದಾರೆ. ಶಾಲೆಗೆ ಹೋಗುತ್ತಿರುವ ಹುಡುಗನಿಗೆ ಚೂರಿ ಎಲ್ಲಿಂದ ಸಿಕ್ಕಿತು ಎಂದು ಪ್ರಶ್ನಿಸಿದ್ದಕ್ಕೆ ಬಸ್ ಸ್ಟಾಂಡ್ ಬಳಿ ಬಿದ್ದು ಸಿಕ್ಕಿದ್ದು ಎಂದು ಹೇಳಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!