ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಈ ರಸ್ತೆಯಲ್ಲಿ ಸ್ವಲ್ಪ ಎಡವಿದ್ರೂ ಅನಾಹುತ ಗ್ಯಾರಂಟಿ…!

ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿಯ ಶಂಕರಪುರ ಹೃದಯಭಾಗದಲ್ಲಿ ಕೇಬಲ್ ಅಳವಡಿಸಲು ಅಗೆದಿರುವ ಗುಂಡಿಯು ಮೃತ್ಯು ಕೂಪವಾಗಿ ಪರಿಣಮಿಸಿದೆ.

ಶಂಕರಪುರ ಬಸ್ ನಿಲ್ದಾಣದ ಸಮೀಪ ಕೇಬಲ್ ಅಳವಡಿಸುವ ಸಲುವಾಗಿ ಬೃಹತ್ ಗುಂಡಿಯನ್ನು ತೆಗೆದಿದ್ದು, ಅದನ್ನು ಮುಚ್ಚದೆ ಬಿಟ್ಟುಹೋಗಿದ್ದಾರೆ. ಇದೀಗ ಈ ಗುಂಡಿಯು ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಮಳೆ ಕೂಡ ಆರಂಭವಾಗಿದ್ದು, ಗುಂಡಿಯಲ್ಲಿ ಮಳೆ ನೀರು ನಿಂತು ಸಾವು ನೋವು ಸಂಭವಿಸುವ ಸಾಧ್ಯತೆ ಇದೆ. ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಹೊಸದಾಗಿ ಡಾಂಬರೀಕರಣ ಆಗಿ ತಿಂಗಳೆ ಕಳೆದಿಲ್ಲ. ಅಷ್ಟರೊಳಗೆ ಕೇಬಲ್ ಅಳವಡಿಕೆಗಾಗಿ ಗುಂಡಿ ಅಗೆದಿದ್ದಾರೆ. ಕಾಮಗಾರಿ ಮುಗಿದ ಬಳಿಕ ಗುಂಡಿಯನ್ನು ಮುಚ್ಚದೆ ಹಾಗೆಯೆ ಬಿಟ್ಟಿದ್ದು, ಇದು ಮಳೆಗಾಲದಲ್ಲಿ ಕುಸಿದು ರಸ್ತೆಯು ಹಾಳಾಗುವ ಸಾಧ್ಯತೆ ಇದೆ. ಹಾಗಾಗಿ ಸಂಬ0ಧಪಟ್ಟವರು ಕೂಡಲೇ ಗುಂಡಿಯನ್ನು ಮುಚ್ಚಿ ಮುಂದೆ ನಡೆಯಬಹುದಾದ ಅನಾಹುತವನ್ನು ತಪ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!