ಜನ ಮನದ ನಾಡಿ ಮಿಡಿತ

Advertisement

ಬಿಕಾನೆರ್ : ನವೀಕರಿಸಿದ 103 ರೈಲು ನಿಲ್ದಾಣಗಳ ಉದ್ಘಾಟನೆ ಮಾಡಿದ ಪ್ರಧಾನಿ

‘ಅಮೃತ ಭಾರತ’ ಯೋಜನೆಯಡಿ ₹1,100 ಕೋಟಿ ವೆಚ್ಚದಲ್ಲಿ ನವೀಕರಿಸಿದ 103 ರೈಲು ನಿಲ್ದಾಣಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೊ ಕಾನ್ಸ್‌ರೆನ್ಸ್ ಮೂಲಕ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ದೇಶವು ತನ್ನ ರೈಲು ಜಾಲ ಮತ್ತು ಮೂಲಸೌಕರ್ಯವನ್ನು ಆಧುನೀಕರಿಸುತ್ತಿದೆ. ಇದು ದೇಶದ ವೇಗ ಮತ್ತು ಪ್ರಗತಿಯನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

₹1.100 ಕೋಟಿಗೂ ಹೆಚ್ಚು ವೆಚ್ಚದಲ್ಲಿ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 86 ಜಿಲ್ಲೆಗಳಲ್ಲಿ ಒಟ್ಟು 103 ನವೀಕರಿಸಿದ ಅಮೃತ ಭಾರತ ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ. ನವೀಕರಿಸಿದ ರೈಲ್ವೆ ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿವೆ. ‘ನವೀಕರಣಗೊಂಡ ಈ ರೈಲು ನಿಲ್ದಾಣಗಳು ಅಮೃತ ಭಾರತ ನಿಲ್ದಾಣಗಳೆಂದು ಗುರುತಿಸಲಿವೆ. 100ಕ್ಕೂ ಹೆಚ್ಚು ಅಮೃತ ಭಾರತ ನಿಲ್ದಾಣಗಳ ನವೀಕರಣ ಪೂರ್ಣಗೊಂಡಿವೆ. ಹಿಂದಿನ ಪರಿಸ್ಥಿತಿ ಹೇಗಿತ್ತು ಮತ್ತು ಈಗಿನ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಜನರು ಸಾಮಾಜಿಕ ಮಾಧ್ಯಗಳಲ್ಲಿ ಹಂಚುತ್ತಿದ್ದಾರೆ’ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

‘ಈ ಅಮೃತ ಭಾರತ ಕೇಂದ್ರಗಳಲ್ಲಿ ಅಭಿವೃದ್ಧಿ ಹಾಗೂ ಪರಂಪರೆ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. ಅವುಗಳು ಸ್ಥಳೀಯ ಕಲೆ ಹಾಗೂ ಸಂಸ್ಕೃತಿಯ ಪ್ರತೀಕವಾಗಿವೆ. ಪ್ರತಿಯೊಂದು ಅಮೃತ ಭಾರತ ನಿಲ್ದಾಣದಲ್ಲಿ ದೇಶದ ಸಾವಿರಾರು ವರ್ಷಗಳ ಹಳೆಯ ಪರಂಪರೆಯನ್ನು ಕಾಣಬಹುದಾಗಿದೆ’ ಎಂದು ಹೇಳಿದ್ದಾರೆ.

‘ಅಮೃತ ಭಾರತ’ ಈ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದಿದ್ದಾರೆ.
ಅಮೃತ ಭಾರತ ಯೋಜನೆ ಅಡಿಯಲ್ಲಿ 1,300ಕ್ಕೂ ಹೆಚ್ಚು ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!