ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಛಲವಾದಿ ನಾರಾಯಣಸ್ವಾಮಿ ಅವರ ದಿಗ್ಬಂಧನ; ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿ0ದ ದಿಗ್ಬಂಧನಕ್ಕೊಳಗಾದ ಘಟನೆ ಅತ್ಯಂತ ಖಂಡನೀಯವೆ0ದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದ್ರು.


ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದೊದಗಿದೆ ಎಂದರೆ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಯ ರಕ್ಷಣೆಯನ್ನು ನಿರೀಕ್ಷಿಸುವುದು ಹೇಗೆ? ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದ್ದು ಪ್ರಜಾಪ್ರಭುತ್ವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಅದನ್ನು ಸ್ವೀಕರಿಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಅದು ಬಿಟ್ಟು ಕಾಂಗ್ರೆಸ್ಸಿನ ಮಂತ್ರಿಗಳು ತಮ್ಮ ಗೂಂಡಾ ಪಡೆಯನ್ನು ಕಳುಹಿಸಿ ಬಿಜೆಪಿ ನಾಯಕರನ್ನು ಬೆದರಿಸಲು ಯತ್ನಿಸಿದರೆ ಅದಕ್ಕೆ ಹೆದರುವವರು ಯಾರೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಗೃಹ ಸಚಿವರಾದ ಪರಮೇಶ್ವರ್ ರವರು ಇದನ್ನು ಗಂಭೀರವಾಗಿ ಪರಿಗಣಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಒತ್ತಾಯಿಸಿದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!