ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಛಲವಾದಿ ನಾರಾಯಣಸ್ವಾಮಿ ಅವರ ದಿಗ್ಬಂಧನ; ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿ0ದ ದಿಗ್ಬಂಧನಕ್ಕೊಳಗಾದ ಘಟನೆ ಅತ್ಯಂತ ಖಂಡನೀಯವೆ0ದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದ್ರು.


ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದೊದಗಿದೆ ಎಂದರೆ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಯ ರಕ್ಷಣೆಯನ್ನು ನಿರೀಕ್ಷಿಸುವುದು ಹೇಗೆ? ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದ್ದು ಪ್ರಜಾಪ್ರಭುತ್ವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಅದನ್ನು ಸ್ವೀಕರಿಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಅದು ಬಿಟ್ಟು ಕಾಂಗ್ರೆಸ್ಸಿನ ಮಂತ್ರಿಗಳು ತಮ್ಮ ಗೂಂಡಾ ಪಡೆಯನ್ನು ಕಳುಹಿಸಿ ಬಿಜೆಪಿ ನಾಯಕರನ್ನು ಬೆದರಿಸಲು ಯತ್ನಿಸಿದರೆ ಅದಕ್ಕೆ ಹೆದರುವವರು ಯಾರೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಗೃಹ ಸಚಿವರಾದ ಪರಮೇಶ್ವರ್ ರವರು ಇದನ್ನು ಗಂಭೀರವಾಗಿ ಪರಿಗಣಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಒತ್ತಾಯಿಸಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!