ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಜೂ.1ರಂದು ನಡೆಯಲಿರುವ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನ

2024ರ ಅ.30ರಂದು ನೋಂದಾವಣೆಗೊ0ಡು ಅಸ್ತಿತ್ವಕ್ಕೆ ಬಂದಿರುವ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನವು ಜೂ.1ರಂದು ಬೆಳಿಗ್ಗೆ ಗಂಟೆ 10 ರಿಂದ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಲಾಗುತ್ತದೆ ಎಂದು ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಸಂಘ ನೋಂದಾವಣೆಗೊ0ಡು ಅಸ್ತಿತ್ವಕ್ಕೆ ಬಂದ ಒಂದು ವರ್ಷದ ಹೊತ್ತಿಗೆ ಸರ್ವ ಸದಸ್ಯರ ಮಹಾಅಧಿವೇಶನ ನಡೆಸಬೇಕೆಂದು ತೀರ್ಮಾನಿಸಿದಂತೆ ಈ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಸುಳ್ಯದಲ್ಲಿ ದೊಡ್ಡ ಸಭೆ ನಡೆಸುವುದೆಂದು ತೀರ್ಮಾನಿಸಿದ್ದೆವು. ಕಾರಣಾಂತರಗಳಿAದ ಅದು ಮುಂದೂಡಲ್ಪಟ್ಟಿತ್ತು. ಈಗ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಸಭೆ ನಡೆಸಲಿದ್ದೇವೆ. ಪ್ರಥಮ ಮಹಾಅಧಿವೇಶನವನ್ನು ರಾಜ್ಯ ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ ಕೆ.ವಿ ಅವರು ಉದ್ಘಾಟಿಸಲಿದ್ದಾರೆ. ಎಲ್ಲಾ ತಾಲೂಕು ಸಂಘದ ಅಧ್ಯಕ್ಷರು ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಸಭೆಯಲ್ಲಿ ಸಂಘದ ಗೌರವ ಸಲಹೆಗಾರರು, ನಿರ್ದೇಶಕರು ಸಹಿತ ಒಟ್ಟು 103 ಮಂದಿ ಆಡಳಿತ ಮಂಡಳಿ ಸದಸ್ಯರನ್ನು ಸಮಾಜಕ್ಕೆ ಗುರುತಿಸುವ ನೆಲೆಯಲ್ಲಿ ಅವರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ ಎಂದವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಕೋಶಾಧಿಕಾರಿ ಹೆಚ್ ಪದ್ಮಗೌಡ ಬೆಳ್ತಂಗಡಿ, ಉಪಾಧ್ಯಕ್ಷ ರಾಮದಾಸ್ ಗೌಡ ಎಸ್, ಬೆಳ್ತಂಗಡಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಕಿಶೋರ್ ಕುಮಾರ್ ನೆಲ್ಲಿಕಟ್ಟೆ, ಮಂಗಳೂರು ಕಾರ್ಯದರ್ಶಿ ಕೆ.ರಾಮಣ್ಣ ಗೌಡ, ಸಂಘದ ಸದಸ್ಯತನ ಅಭಿಯಾನದ ಪುತ್ತೂರು ತಾಲೂಕು ಸಂಚಾಲಕ ಮುರಳೀಧರ ಗೌಡ ಕೆಮ್ಮಾರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!