ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದರೂ ತೆರವುಗೊಳಿಸದ ಇಲಾಖೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಮೂಡಬಿದಿರೆ ರಸ್ತೆಯಲ್ಲಿ ಲೊರೆಟ್ಟೊ ಕಮಲ್ ಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲು ರಸ್ತೆಗೆ ಬಿದ್ದು ಎರಡು ದಿವಸಗಳಾದರೂ ಸಂಬ0ಧ ಪಟ್ಟ ಇಲಾಖೆಯಿಂದ ತೆರವು ಮಾಡುವ ಕಾರ್ಯ ನಡೆದಿಲ್ಲ ಎಂಬ ಅರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಕಮಲ್ ಕಟ್ಟೆ ಎಂಬಲ್ಲಿ ಗುಡ್ಡವನ್ನು ಅಗೆದು ಮಣ್ಣು ತೆಗೆಯಲಾಗಿದೆ. ಅ ಗುಡ್ಡದ ಮೇಲಿದ್ದ ಎರಡು ಕಲ್ಲುಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ. ಒಂದು ಬಂಡೆ ರಸ್ತೆಯ ಮೇಲೆ ಸಂಚಾರಕ್ಕೆ ಅಡಚಣೆಯನ್ನು ಉಂಟುಮಾಡಿದರೆ ಇನ್ನೊಂದು ಕಲ್ಲು ರಸ್ತೆಯ ಬದಿಯಲ್ಲಿ ಬಿದ್ದಿದೆ. ಇದರ ಜೊತೆಗೆ ಜಾಹಿರಾತು ಫಲಕದ ಕಂಬವೊ0ದು ರಸ್ತೆಗೆ ಬಿದ್ದಿದೆ. ಕಲ್ಲುಬಂಡೆ ಹಾಗೂ ಜಾಹೀರಾತು ಫಲಕದ ಕಂಬ ಎರಡು ಕೂಡ ರಸ್ತೆಯ ಮೇಲೆ ಬಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಈ ರಸ್ತೆಯಲ್ಲಿ ಅತೀ ಹೆಚ್ಚು ವಾಹನಗಳು ಸಂಚಾರ ಮಾಡುತ್ತಿದ್ದು ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ಜೀವಕ್ಕೆ ಅಪಾಯ ಆಗುವ ಸಾಧ್ಯತೆಗಳು ಹೆಚ್ಚು ಇವೆ. ಹಾಗಾಗಿ ಎರಡು ದಿನಗಳಿಂದ ನಿರ್ಲಕ್ಷ್ಯವಹಿಸಿರುವ ಇಲಾಖೆಯ ಬಗ್ಗೆ ಸಾರ್ವಜನಿಕರು ಅಪಸ್ವರ ಎತ್ತಿದ್ದಾರೆ. ಅಪಾಯ ಆಗುವ ಮುನ್ನ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆಗೆ ಮುಕ್ತಿನೀಡುವಂತೆ ಸಾರ್ವಜನಿಕ ಮನವಿಯಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!