ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಮಂಗಳೂರು ನಗರದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮುಂಗಾರು ಮಳೆ ಈ ಬಾರಿ ಕರ್ನಾಟಕ ಕರಾವಳಿಯನ್ನು ನಿಗದಿತ ಅವಧಿಗೆ ಮುಂಚಿತವಾಗಿಯೇ ಪ್ರವೇಶಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಕಾಲುವೆಗಳ, ತೋಡುಗಳ ಹೂಳೆತ್ತುವಿಕೆ ಕಾರ್ಯವನ್ನು ಕೈಗೊಳ್ಳದಿರುವುದರಿಂದ ನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ರಸ್ತೆಗಳಲ್ಲಿ ನೆರೆಯನ್ನು ಸೃಷ್ಟಿಸುತ್ತಿದೆ. ಇದರಿಂದ ಸಂಚಾರ ವ್ಯತ್ಯಯಗೊಳ್ಳುತ್ತಿದೆ. ಮಂಗಳೂರಿನ ಪಂಪ್ ವೆಲ್ ಈ ಬಾರಿಯೂ ವರ್ಷಪ್ರತಿಯ ಸಮಸ್ಯೆಯಾದ ನೆರೆ ನೀರು ನಿಲ್ಲುವ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಸಾಗುವ ವಾಹನ ಸವಾರರು ಕಷ್ಟಪಡಬೇಕಾಯಿತು. ಇಲ್ಲಿ ಕಾಲುವೆಯನ್ನು ಅತಿಕ್ರಮಿಸಿ ಕಟ್ಟಡಗಳನ್ನು ಕಟ್ಟುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಹಿಂದೆ ಇದ್ದ ತೋಡಿನ ಅಗಲ ಕಿರಿದಾಗಿದೆ. ಇದರಿಂದ ನಾಲ್ಕು ಕಡೆಯಿಂದ ಪಂಪ್ ವೆಲ್ ಪ್ಲೈಓವರಿನತ್ತ ಬರುವ ನೀರು ರಸ್ತೆಯಲ್ಲಿ ನಿಂತು ಬಿಡುತ್ತದೆ.

ಜಿಲ್ಲೆಯಾದ್ಯಂತ ಮುಂಗಾರು ಮಳೆ ಅನಾಹುತಗಳನ್ನು ಉಂಟು ಮಾಡಿದೆ. ನಗರ ಹಾಗು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಉರುಳಿವೆ. ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ತಡೆಯುಂಟಾಗಿದೆ. ಮರಗಳು ಉರುಳಿ ವಾಹನಗಳು ಜಖಂಗೊOಡಿವೆ. ಮನೆಗಳಿಗೆ ನೀರು ನುಗ್ಗಿ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ, ವಿದ್ಯುತ್ ಮತ್ತು ವಿದ್ಯುನ್ಮಾನ ಉಪಕರಣಗಳು ಹಾಳಾಗಿವೆ. ಗುಡ್ಡ ನೆಲಸಮ ಮಾಡಿದ, ರಸ್ತೆ ಮಾಡಿದ ಸ್ಥಳಗಳಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತಗಳು ಸಂಭವಿಸಿವೆ. ಮಣ್ಣು ಜರಿದು ಮನೆಯ ಗೋಡೆಗಳಿಗೆ ಹಾನಿಯಾಗಿದೆ.ಕಾಂಪೌOಡು ಗೋಡೆಗಳು ಕುಸಿದಿವೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!