ಜನ ಮನದ ನಾಡಿ ಮಿಡಿತ

Advertisement

ಕಾಪು: ಭಾರೀ ಗಾಳಿಮಳೆಗೆ ಪ್ರಕ್ಷುಬ್ಧಗೊಂಡ ಕಡಲು; ಪ್ರವಾಸಿಗರಿಗೆ ಎಚ್ಚರಿಕೆ, ತಡೆಬೇಲಿ ಅಳವಡಿಕೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಮಳೆಗೆ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಯಾರೂ ಇಳಿಯಬಾರದೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೀಚ್ ಅಪಾಯಕಾರಿಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಪ್ರವಾಸಿಗರು ಬೀಚ್ ನತ್ತ ಆಗಮಿಸಿದ್ದು ಅಪಾಯವನ್ನು ಆಹ್ವಾನಿಸುತ್ತಿದ್ದಾರೆ. ಕಾಪು ಬೀಚ್ ಲೈಟ್ ಹೌಸ್ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹಾಗೆ ಬಂದವರು ಬಂಡೆಕಲ್ಲುಗಳ ಮೇಲೆ ನಿಂತು ಸೆಲ್ಫಿ ತೆಗೆಯುವ ದುಸ್ಸಾಹಸಕ್ಕೆ ಮುಂದಾಗುವುದು ಕಂಡುಬoದಿದೆ.ಇದೇ ಕಾರಣಕ್ಕೆ ಲೈಟ್ ಹೌಸ್ ಬಳಿ ಬೀಚ್ ನುದ್ದಕ್ಕೂ ತಡೆಬೇಲಿ ಅಳವಡಿಸಲಾಗಿದೆ. ಉಳಿದಂತೆ ಮಳೆಯ ಅಬ್ಬರಕ್ಕೆ ಕೆಲವೆಡೆ ಕಡಲ್ಕೊರೆತ ಸಂಭವಿಸಿದ್ದು, ಕಡಲತೀರವಾಸಿಗಳಲ್ಲಿ ಆತಂಕ ಮನೆಮಾಡಿದೆ.

 

 

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!