ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಿರ್ವದ ಬಿಳಿಯಾರಿನಲ್ಲಿ ನಾಲ್ಕು ದಿನಗಳಿಂದ ಕರೆಂಟ್ ಇಲ್ಲದೆ ಬಿಳಿಯಾರು ಗ್ರಾಮಸ್ಥರ ಪರದಾಟ

ಶಿರ್ವ ವ್ಯಾಪ್ತಿಯ ಕುರ್ಕಾಲು ಗ್ರಾಮ ಪಂಚಾಯತ್ ಕುಂಜಾರು ಗಿರಿಯ ಬಿಳಿಯಾರು ಪರಿಸರದಲ್ಲಿ ಸುಮಾರು 4 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಇಲ್ಲದೆ ನೀರಿನ ಅಭಾವದ ಜೊತೆಗೆ ಮನೆಯ ಫ್ರಿಜ್ ನಲ್ಲಿಟ್ಟಿದ್ದ ದಿನಬಳಕೆಯ ಸಾಮಗ್ರಿಗಳು ಕೂಡ ಹಾಳಾಗಿವೆ. ರಾತ್ರಿಯಿಡಿ ನಿದ್ದೆ ಇಲ್ಲದೆ ಜನರು ಸಾಕಷ್ಟು ತೊಂದರೆ ಅನುಭವಿಸಿದರು. ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಹೀಗಾಗಿ ಇಂದು ಗ್ರಾಮಸ್ಥರು ಮತ್ತು ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎಂ.ಜಿ ನಾಗೇಂದ್ರ ನೇತೃತ್ವದಲ್ಲಿ ಶಿರ್ವ ಮೆಸ್ಕಾಂ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು.

ಮೆಸ್ಕಾಂ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ ಗ್ರಾಮಸ್ಥರು ಮತ್ತು ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಹೇಶ್ ಶೆಟ್ಟಿ ಬಿಳಿಯಾರು ಅವರು ಅಧಿಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಮೆಸ್ಕಾಂ ಸಿಬ್ಬಂದಿ ಕೊರತೆಯಿಂದಾಗಿ ಸಮಸ್ಯೆ ಆಗಿದೆ. ಈ ಭಾಗದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದರು. ಇದರಿಂದ ಗ್ರಾಮಸ್ಥರು ಸಮಾಧಾನಗೊಂಡರು. ಕುರ್ಕಾಲು ಗ್ರಾಮ ಪಂಚಾಯತ್ ಸದಸ್ಯೆ ಸಿಮಿ ಡಿಸೋಜಾ, ಸ್ಥಳೀಯರಾದ ಸುರೇಶ್ ಕುರ್ಕಾಲು ಹಾಗೂ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!