ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮೇ 21 ರಂದು ‘ಯಕ್ಷಗಾನ ಕಲಾವಿದರ ಸಮಾವೇಶ’

ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ ೩೧ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ ೯ಗಂಟೆಗೆ ಕಲಾವಿದರಿಗೆ ಕೆಎಮ್‌ಸಿ ಮಣಿಪಾಲ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ ೧೦ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ ೧೦.೩೦ಕ್ಕೆ ಮಾಧವ ಮಾತೃ ಗ್ರಾಮಂ ಕೂಡಿಯಾಟ್ಟಂ ಗುರುಕುಲಂ ಇಜ್ಜೌಲಕುಡ, ತ್ರಿಶೂರ್ ಇವರಿಂದ “ಕೂಡಿಯಾಟ್ಟಂ”, “ಸೀತಾಪಹರಣಂ-ಜಟಾಯುವಧA” ಪ್ರದರ್ಶನಗೊಳ್ಳಲಿದೆ. ೧೧.೩೦ಕ್ಕೆ ಯಕ್ಷಗಾನ ಕಲಾವಿದರಿಗೆ “ಕಲೆ ಪೂರ್ಣಾವಧಿ ಉದ್ಯೋಗವಾಗಿರಬೇಕೆ.. ಉಪವೃತ್ತಿಯಾಗಿರಬೇಕೆ..?” ವಿಷಯದ ಕುರಿತು ಚರ್ಚೆ ಕಾರ್ಯಕ್ರಮ ನಡೆಯಲಿದೆ ಎಂದರು. 

ಕಲಾರAಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಮಧ್ಯಾಹ್ನ ೨.೩೦ಕ್ಕೆ ನಡೆಯುವ ಸಮಾರೋಪದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಶ್ರೀ ಸುಶೀಂಧ್ರತೀರ್ಥರು ೫೦ ಮಂದಿ ಹಿರಿಯ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಆರ್ಶೀವಚನ ನೀಡಲಿದ್ದಾರೆ. ಉದ್ಯಮಿ ಡಾ.ಜಿ.ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಸುವರ್ಣ ಉಡುಗೊರೆ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಸದಾಶಿವ ರಾವ್ ಉಪಸ್ಥಿತರಿದ್ದರು.
===========================

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!