ಜನ ಮನದ ನಾಡಿ ಮಿಡಿತ

Advertisement

ರಾಮಕುಂಜ: ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು

ಉಪ್ಪಿನಂಗಡಿ-ಉಪ್ಪಿನ0ಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊ0ಡಿದೆ.

ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಬ್ದುಲ್ ಸಲಿಂ ಎಂಬವರು ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ರು. ಅದರೊಳಗೆ ಅಬ್ದುಲ್ ರಹಿಮಾನ್, ರಮ್ಲಾನ್, ಅಬ್ಬಾಸ್ ಎಂಬವರು ಕುಳಿತು ಮಾತನಾಡಿಕೊಳ್ಳುತ್ತಿದ್ರು. ಅಷ್ಟರಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮಾವಿನ ಮರ ವಾಲತೊಡಗುವುದನ್ನು ಗಮನಿಸಿದ ಇವರುಗಳು ಅದರಿಂದ ಇಳಿದು ಓಡಿ ಹೋಗಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಸಂಜೆ ಬೀಸಿದ ಗಾಳಿ ಮಳೆಗೆ ಮಾವಿನ ಮರ ಬುಡ ಸಮೇತ ನೆರಕ್ಕುರುಳಿ ಬಿದ್ದಿದ್ದು, 100 ಮೀಟರ್ ದೂರದ ತನಕ ರಸ್ತೆಯಲ್ಲಿ ವಿಸ್ತಾರವಾಗಿ ಬಿದ್ದುಕೊಂಡಿತ್ತು. ಸ್ಥಳೀಯ ಯುವಕರು ಮರ ತುಂಡರಿಸುವ ಯಂತ್ರ ತಂದು ರಸ್ತೆಯನ್ನು ತೆರವುಗೊಳಿಸಿದ್ದಾರೆ. ಬಳಿಕ ಕಾರಿನ ಮೇಲೆ ಇದ್ದ ಮರವನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಯಿತು.

 

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!