ಜನ ಮನದ ನಾಡಿ ಮಿಡಿತ

Advertisement

ರಾಮಕುಂಜ: ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು

ಉಪ್ಪಿನಂಗಡಿ-ಉಪ್ಪಿನ0ಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊ0ಡಿದೆ.

ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಬ್ದುಲ್ ಸಲಿಂ ಎಂಬವರು ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೋಗಿದ್ರು. ಅದರೊಳಗೆ ಅಬ್ದುಲ್ ರಹಿಮಾನ್, ರಮ್ಲಾನ್, ಅಬ್ಬಾಸ್ ಎಂಬವರು ಕುಳಿತು ಮಾತನಾಡಿಕೊಳ್ಳುತ್ತಿದ್ರು. ಅಷ್ಟರಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮಾವಿನ ಮರ ವಾಲತೊಡಗುವುದನ್ನು ಗಮನಿಸಿದ ಇವರುಗಳು ಅದರಿಂದ ಇಳಿದು ಓಡಿ ಹೋಗಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಸಂಜೆ ಬೀಸಿದ ಗಾಳಿ ಮಳೆಗೆ ಮಾವಿನ ಮರ ಬುಡ ಸಮೇತ ನೆರಕ್ಕುರುಳಿ ಬಿದ್ದಿದ್ದು, 100 ಮೀಟರ್ ದೂರದ ತನಕ ರಸ್ತೆಯಲ್ಲಿ ವಿಸ್ತಾರವಾಗಿ ಬಿದ್ದುಕೊಂಡಿತ್ತು. ಸ್ಥಳೀಯ ಯುವಕರು ಮರ ತುಂಡರಿಸುವ ಯಂತ್ರ ತಂದು ರಸ್ತೆಯನ್ನು ತೆರವುಗೊಳಿಸಿದ್ದಾರೆ. ಬಳಿಕ ಕಾರಿನ ಮೇಲೆ ಇದ್ದ ಮರವನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಯಿತು.

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!