ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಜಪೆ ಚಲೋ ನಡೆಸಿದ್ದಕ್ಕಾಗಿ ಬಜಪೆ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು..??!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬಜಪೆ ಪೇಟೆಯ ಶಾರದಾ ಮಂಟಪದ ಬಳಿ ನಡೆದ ಬೃಹತ್ ಜನಾಗ್ರಹ ಸಮಾವೇಶಕ್ಕೆ ಪೊಲೀಸ್ ಅನುಮತಿ ಪಡೆದಿಲ್ಲ ಹಾಗೂ ಸಮಾವೇಶದಲ್ಲಿ ಭಾಗವಹಿಸಿದ ಮುಖ್ಯ ಭಾಷಣಕಾರಾರ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಜಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಜಪೆ ಠಾಣೆಯ ಕಾನ್‌ಸ್ಟೇಬಲ್ ಚಿದಾನಂದ ಕಟೆ ಅವರು ದೂರು ದಾಖಲಿಸಿದ್ದು, ಬಜಪೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗಳದ ವತಿಯಿಂದ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಸುಮಾರು 3 ಸಾವಿರ ಮಂದಿ ಭಾಗವಹಿಸಿದ್ದಾರೆ. ಕಾರ್ಯಕ್ರಮ ಆಯೋಜನೆಗಾಗಲೀ ಅಥವಾ ಧ್ವನಿವರ್ಧಕ ಬಳಸುವುದಕ್ಕಾಗಲೀ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ.

ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಬಜಪೆ ಪೇಟೆಯ ಬಸ್ಸು ನಿಲ್ದಾಣಕ್ಕೆ ಬರುವ ಮತ್ತು ನಿಲ್ದಾಣದಿಂದ ಹೊರಹೋಗುವ ರಸ್ತೆಯನ್ನು ಉದ್ದೇಶ ಪೂರ್ವಕವಾಗಿ ಅಕ್ರಮ ಕೂಟ ಕಟ್ಟಿಕೊಂಡು ತಡೆದಿದ್ದಾರೆ. ರಾಜ್ಯ ಹೆದ್ದಾರಿ 67ರ ಇಕ್ಕೆಲಗಳಲ್ಲಿ ಮತ್ತು ಹೆದ್ದಾರಿಯ ಮಧ್ಯದಲ್ಲಿಯೂ ನಿಂತು ವಾಹನಗಳು ಮತ್ತು ಜನ ಸಾಮಾನ್ಯರ ಮುಕ್ತ ಓಡಾಟಕ್ಕೆ ಅಡ್ಡಿಪಡಿಸಿದ್ದಾರೆ. ಸಭೆಯಲ್ಲಿ ಓರ್ವ ಭಾಷಣಕಾರ ಧರ್ಮ-ಧರ್ಮಗಳ ನಡುವೆ ದ್ವೇಷವನ್ನು ಉಂಟುಮಾಡಿ, ಗಲಭೆ ಸೃಷ್ಟಿಸುವ ಹಾಗೂ ಜೀವ ಬೆದರಿಕೆ ಹಾಕುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ.

ಭಾಷಣಕಾರರು ಮತ್ತು ಸಂಘಟಕರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಬಜಪೆ ಪೊಲೀಸರ ನಡೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!