ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನೀರಿನ ತೋಡಿನಲ್ಲಿ ಹೂಳು..! ಜನಜೀವನ ಅಲ್ಲೋಲ..ಕಲ್ಲೋಲ

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕು ಜೋಡು ರಸ್ತೆ, ಪಿಲಿಚಂಡಿ ಸ್ಥಾನದಲ್ಲಿ ಹರಿಯುವ ನೀರಿನ ತೋಡಿನಲ್ಲಿ ಹೂಳು ತುಂಬಿ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ.


ಇಲ್ಲಿನ ಪ್ರದೇಶದಲ್ಲಿ ಮಳೆಗಾಲದ ಪೂರ್ವಭಾವಿಯಾಗಿ ಹಲವು ವರ್ಷಗಳಿಂದ ತೋಡಿನ ಹೂಳು ತೆರವುಗೊಳಿಸಲು ಹಲವು ಬಾರಿ ಸೂಚಿಸಲಾಗಿತ್ತು. ಅಲ್ಲದೆ, ಈ ವಿಚಾರವನ್ನು ಮೂರು ವರ್ಷಗಳಿಂದ ಗ್ರಾಮ ಪಂಚಾಯತ್ ಗಮನಕ್ಕೆ ತರಲಾಗಿತ್ತು. ಅದನ್ನು ನಿರ್ಲಕ್ಷಿಸಿದ ಪರಿಣಾಮ ಇಂದು ಇಂತಹ ಪರಿಸ್ಥಿತಿಯನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಭಾಗದಲ್ಲಿ ಹಲವು ವರ್ಷಗಳಿಂದ ತೋಡಿನ ಹೂಳು ಎತ್ತಿಲ್ಲ. ಎರಡು ವರ್ಷಗಳಲ್ಲಿ ನೆರೆ ಬಂದು ಮನೆಯೊಳಗೆ ನೀರು ಪ್ರವೇಶಿಸಿ ಜನರ ಜೀವನ ಪರದಾಡುವಂತಾಗಿತ್ತು, ಅದೇ ರೀತಿ ಈ ಬಾರಿಯೂ ಇಲ್ಲಿನ ಮನೆಗಳಲ್ಲಿ ನೀರು ಹೋಗಿ ಜನರ ಜೀವನ ಅಸ್ತವ್ಯಸ್ತವಾಗಿದೆ.

ಮನೆಯ ಒಳಗೆ ನೀರು ತುಂಬಿ ಜೊತೆಗೆ ಅಪಾರ ವಸ್ತುಗಳು ಹಾನಿಯಾಗಿದೆ. ಸುಮಾರು ಮನೆಯ ಒಳಗೆ ನೀರು ತುಂಬಿದ್ದು, ಮನೆಯ ಮಂದಿಗೆ ಮನೆಯಿಂದ ಹೊರಬರಲೂ ಸಾಧ್ಯವಿಲ್ಲದಂತಾಗಿದೆ. ಈ ಮನೆಯಲ್ಲಿ ಸುಮಾರು ಹದಿನೈದು ಸಣ್ಣ ಸಣ್ಣ ಮಕ್ಕಳೇ ಇದ್ದು, ಮನೆಯು ನೀರಿನಿಂದ ತುಂಬಿ ರಸ್ತೆಯಲ್ಲಿ ಜೀವನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಜೀವನ ಜೊತೆಯೂ ಸರಕಾರದ ಆಟ ಎಂಬ0ತೆ ಮನೆ ಹಾಗೂ ಮಕ್ಕಳ ಪಾಡನ್ನು ಕೇಳುವವರಿಲ್ಲ…ಮನೆಯ ಹತ್ತಿರದಲ್ಲಿಯೂ ಯಾವುದೇ ರೀತಿಯ ನೀರು ಹೋಗುವ ವ್ಯವಸ್ಥೆಯಿಲ್ಲದೆ, ರಸ್ತೆ ಬದಿಯಲ್ಲಿ ಮಾತ್ರ ನೀರು ಹೋಗುವ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.ಮೂರು ವರ್ಷದಿಂದ ಗ್ರಾಮ ಪಂಚಾಯತಿಗೆ ಮನವಿ ಮಾಡಿದ್ದರೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಈ ಸಾಮಾನ್ಯ ಜನರ ಜೀವನದ ಜೊತೆಗೆ ಚೆಲ್ಲಾಟ ಆಡುವ ಬದಲು ಆದಷ್ಟು ಬೇಗ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕಾಗಿ ಈ ಮೂಲಕ ಗ್ರಾಮಸ್ಥರು ವಿನಂತಿಸಿಕೊ0ಡಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!