ಜನ ಮನದ ನಾಡಿ ಮಿಡಿತ

Advertisement

ಭುವನೇಶ್ವರ: ಪತ್ರಕರ್ತನ ಮೇಲೆ ಹಲ್ಲೆ; ಪ್ರಕರಣ ದಾಖಲು

ಒಡಿಶಾದ ಬೋಲಂಗೀರ್‌ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪತ್ರಕರ್ತ ಬಿಜಯ್ ಪ್ರಧಾನ್‌ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.

ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!