ಜನ ಮನದ ನಾಡಿ ಮಿಡಿತ

Advertisement

ಮುಸ್ಲಿಂ ಯುವಕನ ಕೊಲೆ : ಎಸ್.ಡಿ.ಪಿ.ಐ ಖಂಡನೆ

ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿ ಮುಸ್ಲಿಂ ಯುವಕರಿಬ್ಬರ ಮೇಲೆ ನಡೆದ ಭೀಕರ ತಲ್ವಾರ್ ದಾಳಿಯ ಪರಿಣಾಮ ಓರ್ವ ಯುವಕ ಮೃತಪಟ್ಟಿರುತ್ತಾರೆ.

ಕಳೆದ ಕೆಲ ದಿನಗಳಿಂದ ಜಿಲ್ಲೆಯೆಲ್ಲೆಡೆ ಸಂಘಪರಿವಾರ ನಾಯಕರು ನಡೆಸುತ್ತಿರುವ ಪ್ರತೀಕಾರದ ಭಾಷಣದಿಂದ ಪ್ರೇರಣೆಗೊಂಡವರೇ ಈ ಕೃತ್ಯ ನಡೆಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿದ್ದು ಪೊಲೀಸ್ ಇಲಾಖೆ ಈ ಹತ್ಯೆಯಲ್ಲಿ ಭಾಗಿಗಳಾದ ಹಾಗೂ ಇದರ ಹಿಂದಿರುವ ಸೂತ್ರಧಾರರನ್ನು ಬಂಧಿಸಬೇಕು ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

ಅದೇ ರೀತಿ ಈ ಹಿಂದೆ ಬಜ್ಪೆಯಲ್ಲಿ ನಡೆದಿದ್ದ ರೌಡಿ ಶೀಟರ್ ಓರ್ವನ ಹತ್ಯೆಯ ಬಳಿಕ ಸಂಘಪರಿವಾರ ನಾಯಕರು ನಿರಂತರವಾಗಿ ಪ್ರತೀಕಾರ ತೀರಿಸುವ ಭಾಷಣಗಳನ್ನು ಬಹಿರಂಗವಾಗಿ ನಡೆಸಿದ್ದರೂ ಇವರ ವಿರುದ್ಧ ಕ್ರಮ ಕೈಗೊಳ್ಳದ, ಜನಸಾಮಾನ್ಯರ ರಕ್ಷಣೆಯ ಖಾತ್ರಿ ನೀಡದ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!